ನವದೆಹಲಿ: ಉಕ್ರೇನ್ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಶನಿವಾರ ತಮ್ಮ ದೇಶದ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ತಡೆಯಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸಂಪರ್ಕಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಸಂಬಂಧವನ್ನು ಉಲ್ಲೇಖಿಸಿದ ಕುಲೇಬಾ, “ಭಾರತದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿರುವ ಎಲ್ಲಾ ದೇಶಗಳು ಅಧ್ಯಕ್ಷ ಪುಟಿನ್ ಅವರಿಗೆ ಮನವಿ ಮಾಡಬಹುದು. ಅಧ್ಯಕ್ಷ ಪುಟಿನ್ ಅವರನ್ನು ತಲುಪಲು ಮತ್ತು ಅವರಿಗೆ ಪರಿಸ್ಥಿತಿ ವಿವರಿಸಲು ನಾವು ಪ್ರಧಾನಿ ಮೋದಿಗೆ ಕರೆ ನೀಡುತ್ತೇವೆ. ಈ ಯುದ್ಧವು ಎಲ್ಲರ ಹಿತಾಸಕ್ತಿಗೆ ವಿರುದ್ಧವಾಗಿದೆ” ಎಂದಿದ್ದಾರೆ.
“ಸಾಮಾನ್ಯ ಭಾರತೀಯರು ಭಾರತದಲ್ಲಿನ ರಷ್ಯಾದ ರಾಯಭಾರಿ ಕಚೇರಿಯ ಮೇಲೆ ಒತ್ತಡ ಹೇರಬಹುದು, ಯುದ್ಧವನ್ನು ನಿಲ್ಲಿಸುವಂತೆ ಒತ್ತಾಯಿಸಬಹುದು. ಉಕ್ರೇನ್ಗೆ ಈ ಯುದ್ಧದ ಅಗತ್ಯವಿಲ್ಲ” ಎಂದು ಕುಲೇಬಾ ಹೇಳಿದ್ದಾರೆ.
ಫೆಬ್ರವರಿ 24 ರಂದು ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಎರಡು ಬಾರಿ ಮಾತನಾಡಿದ್ದಾರೆ. ಫೆಬ್ರವರಿ 24 ರಂದು ತಮ್ಮ ಮೊದಲ ಸಂಭಾಷಣೆಯಲ್ಲಿ, ಹಿಂಸಾಚಾರವನ್ನು ನಿಲ್ಲಿಸಲು ಮತ್ತು ರಾಜತಾಂತ್ರಿಕ ಮಾತುಕತೆಗಳ ಮೂಲಕ ಪರಿಹಾರದ ಹಾದಿಗೆ ಮರಳಲು ಮೋದಿ ಮನವಿ ಮಾಡಿದ್ದರು.
ಎರಡನೇ ಮಾತುಕತೆಯಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆಯು ಮಾತುಕತೆಯ ಪ್ರಮುಖ ಕೇಂದ್ರವಾಗಿದ್ದರೂ, ಮಾತುಕತೆಯ ಸಮಯದಲ್ಲಿ ಪಿಎಂ ಮೋದಿ ಅವರು ಉಕ್ರೇನ್ ಮೇಲಿನ ದಾಳಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.