ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ 54 ಸ್ಥಾನಗಳನ್ನು ಒಳಗೊಂಡಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.
ರಾಜಕೀಯವಾಗಿ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಸುಮಾರು ತಿಂಗಳ ಅವಧಿಯ ಮತದಾನ ಪ್ರಕ್ರಿಯೆಯ ಅಂತ್ಯವನ್ನು ಸೂಚಿಸುವ ಮತದಾನ ಇಂದು ನಡೆಯುತ್ತಿದೆ. ಅಜಂಗಢ್, ಮೌ, ಜೌನ್ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್ಭದ್ರ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.
ಇದು ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದ್ದು, 613 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ.
ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ ಇಂದು ಪ್ರಜಾಪ್ರಭುತ್ವ ಉತ್ಸವದ ಕೊನೆಯ ಹಂತ ನಡೆಯುತ್ತಿದೆ ಎಂದಿರುವ ಮೋದಿ, ಈ ಏಳನೇ ಮತ್ತು ಕೊನೆಯ ಹಂತದ ಅಸೆಂಬ್ಲಿ ಚುನಾವಣೆಗಳಲ್ಲಿ ಪೂರ್ಣ ಉತ್ಸಾಹದಿಂದ ಭಾಗವಹಿಸಿ ಮತದಾನದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸುವಂತೆ ಎಲ್ಲಾ ಮತದಾರರನ್ನು ಟ್ವೀಟ್ನಲ್ಲಿ ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.