ನವದೆಹಲಿ: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಫಲಾನುಭವಿಗಳು ಮತ್ತು ಜನೌಷಧಿ ಕೇಂದ್ರಗಳ ಮಾಲೀಕರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಜನೌಷಧಿ ದಿವಸ್ ಸಂದರ್ಭದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ನಂತರ ಸಂವಾದ ನಡೆಯಲಿದೆ.
ಕಾರ್ಯವನ್ನು ʼಜನ್ ಔಷಧಿ-ಜನ್ ಉಪಯೋಗಿʼ ಎಂಬ ಥೀಮ್ನೊಂದಿಗೆ ಆಚರಣೆ ಮಾಡಲಾಗುತ್ತದೆ. ಯೋಜನೆಯ ಸಾಧನೆಗಳನ್ನು ಪ್ರಚಾರ ಮಾಡುವ ಮತ್ತು ಅದರ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್ 7 ರಂದು ಜನೌಷಧಿ ದಿವಸ್ ಅನ್ನು ಆಚರಿಸಲಾಗುತ್ತದೆ. ಕಳೆದ ವರ್ಷ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮೋದಿ ಅವರು ಯೋಜನೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದ್ದರು.
ಜನರಿಕ್ ಔಷಧಿಗಳ ಬಳಕೆ ಮತ್ತು ಜನೌಷಧಿ ಪರಿಯೋಜನಾ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 1 ರಿಂದ ದೇಶಾದ್ಯಂತ ಜನೌಷಧಿ ವಾರವನ್ನು ಆಚರಿಸಲಾಗುತ್ತದೆ. ಈ ವಾರದಲ್ಲಿ ಜನೌಷಧಿ ಸಂಕಲ್ಪ ಯಾತ್ರೆ, ಮಾತೃ ಶಕ್ತಿ ಸಮ್ಮಾನ್, ಜನೌಷಧಿ ಬಾಲ ಮಿತ್ರ, ಜನೌಷಧಿ ಜನ ಜಾಗರಣ ಅಭಿಯಾನ, ಆವೋ ಜನೌಷಧಿ ಮಿತ್ರ ಬನೆ ಮತ್ತು ಜನೌಷಧಿ ಜನ ಆರೋಗ್ಯ ಮೇಳ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕೇಂದ್ರ ಸರ್ಕಾರದ ಒಂದು ಉದಾತ್ತ ಉಪಕ್ರಮವಾಗಿದ್ದು, ಇದು ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಜನಸಾಮಾನ್ಯರ ನೀಡುವ ಮೂಲಕ ಅವರಿಗೆ ನಿರಾಳತೆಯನ್ನು ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.