ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಭಾರತೀಯರನ್ನು, ವಿಶೇಷವಾಗಿ ಯುದ್ಧ ಪೀಡಿತ ದೇಶದಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟ ಉಕ್ರೇನ್ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು ಎಂದು ಮೂಲಗಳು ವರದಿ ಮಾಡಿವೆ.
“ಪ್ರಧಾನಿ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಸುಮಾರು 35 ನಿಮಿಷಗಳ ಕಾಲ ಫೋನ್ ಸಂಭಾಷಣೆ ನಡೆಯಿತು. ಉಕ್ರೇನ್ನಲ್ಲಿ ಆಗುತ್ತಿರುವ ಪರಿಸ್ಥಿತಿಯ ಕುರಿತು ಉಭಯ ನಾಯಕರು ಚರ್ಚಿಸಿದರು. ರಷ್ಯಾ ಮತ್ತು ಉಕ್ರೇನ್ ನಡುವಿನ ನೇರ ಸಂವಾದವನ್ನು ಪ್ರಧಾನಿ ಶ್ಲಾಘಿಸಿದರು”ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಉಕ್ರೇನ್ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವಲ್ಲಿ ಉಕ್ರೇನ್ ಸರ್ಕಾರ ನೀಡಿದ ಸಹಾಯಕ್ಕಾಗಿ ಪ್ರಧಾನ ಮಂತ್ರಿ ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಧನ್ಯವಾದ ಅರ್ಪಿಸಿದರು. ಸುಮಿಯಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಡೆಯುತ್ತಿರುವ ಪ್ರಯತ್ನಗಳಲ್ಲಿ ಉಕ್ರೇನ್ ಸರ್ಕಾರದಿಂದ ಪ್ರಧಾನಿ ನಿರಂತರ ಬೆಂಬಲವನ್ನು ಕೋರಿದರು ಎನ್ನಲಾಗಿದೆ.
ಕಳೆದ ವಾರ, ಉಕ್ರೇನ್ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ತಮ್ಮ ದೇಶದ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ತಡೆಯಲು ರಷ್ಯಾದ ಅಧ್ಯಕ್ಷ ಪುಟಿನ್ ಅವರನ್ನು ತಲುಪುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದರು.
ಇಲ್ಲಿಯವರೆಗೆ ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷರ ಜೊತೆ ಎರಡು ಬಾರಿ ಮಾತನಾಡಿದ್ದಾರೆ.
ಫೆಬ್ರವರಿ 24 ರಂದು ಅಧ್ಯಕ್ಷ ಪುಟಿನ್ ಅವರೊಂದಿಗಿನ ಅವರ ಮೊದಲ ಸಂಭಾಷಣೆಯ ಸಮಯದಲ್ಲಿ, ಹಿಂಸಾಚಾರವನ್ನು ನಿಲ್ಲಿಸಲು ಮತ್ತು ರಾಜತಾಂತ್ರಿಕ ಮಾತುಕತೆಗಳ ಹಾದಿಗೆ ಮರಳಲು ಪಿಎಂ ಮನವಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.