ನವದೆಹಲಿ : ಎಲ್ಲಾ ಐದು ರಾಜ್ಯಗಳಲ್ಲಿ ಹೀನಾಯ ಸೋಲು ಕಂಡ ನಂತರ, ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಸೋಲನ್ನು ಒಪ್ಪಿಕೊಂಡಿದ್ದಾರೆ ಮತ್ತು ಜನರ ಆದೇಶವನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ.
ಟ್ವಿಟ್ ಮಾಡಿರುವ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಶ್ರಮಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. ಕಾಂಗ್ರೆಸ್ ಗೋವಾದಲ್ಲಿ 40 ಸ್ಥಾನಗಳ ಪೈಕಿ 11, ಮಣಿಪುರದಲ್ಲಿ 40 ಸ್ಥಾನಗಳ ಪೈಕಿ 9 , ಪಂಜಾಬ್ನಲ್ಲಿ 117 ಸ್ಥಾನಗಳ ಪೈಕಿ 18, ಉತ್ತರ ಪ್ರದೇಶದಲ್ಲಿ 403 ಸ್ಥಾನಗಳ ಪೈಕಿ ಎರಡು ಮತ್ತು ಉತ್ತರಾಖಂಡದಲ್ಲಿ 70 ಸ್ಥಾನಗಳ ಪೈಕಿ 18 ಸೀಟುಗಳನ್ನು ಗೆದ್ದಿದೆ.
ಕಾಂಗ್ರೆಸ್ ಪಂಜಾಬಿನಲ್ಲಿ ಹೀನಾಯ ಸೋಲು ಕಂಡಿದೆ, ಕಾಂಗ್ರೆಸ್ ಕೇವಲ 18 ಸ್ಥಾನಗಳಿಗೆ ಕುಸಿದಿದ್ದರೆ, ಎಎಪಿ ಪಂಜಾಬ್ನಲ್ಲಿ 92 ಸ್ಥಾನಗಳನ್ನು ಗೆದ್ದು ತನ್ನ ಚೊಚ್ಚಲ ವಿಜಯದತ್ತ ದಾಪುಗಾಲಿಟ್ಟಿದೆ. ಕಾಂಗ್ರೆಸ್ ಪ್ರಮುಖ ನಾಯಕರಾದ ನವಜೋತ್ ಸಿಂಗ್ ಸಿಧು, ಚರಂಜಿತ್ ಚನ್ನಿ ಎಎಪಿ ಅಭ್ಯರ್ಥಿಗಳ ಎದುರು ಸೋತಿದ್ದಾರೆ.
ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ವಿಫಲವಾಗಿದೆ.
Humbly accept the people’s verdict. Best wishes to those who have won the mandate.
My gratitude to all Congress workers and volunteers for their hard work and dedication.
We will learn from this and keep working for the interests of the people of India.
— Rahul Gandhi (@RahulGandhi) March 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.