ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ನ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ, ಹೊಸ ಸರ್ಕಾರಗಳ ರಚನೆಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.
ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದ್ದು, ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ.
ಉತ್ತರಪ್ರದೇಶದಲ್ಲಿ ಬಿಜೆಪಿಗೆ ಐತಿಹಾಸಿಕ ಎರಡನೇ ಅವಧಿಗೆ ಅಧಿಕಾರ ನೀಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿನ್ನೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಗೆ ರಾಜೀನಾಮೆ ನೀಡಿ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೂ ಸಿಎಂ ಹುದ್ದೆಯಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಗಳಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನಿನ್ನೆ ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲ ಗುರ್ಮೀತ್ ಸಿಂಗ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ರಾಜ್ಯಪಾಲರು ಅವರಿಗೆ ಸೂಚಿಸಿದ್ದಾರೆ. ಖತೀಮಾ ಕ್ಷೇತ್ರದಿಂದ ಉತ್ತರಾಖಂಡದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರ ಸಚಿವರು ಮತ್ತು ಹಿರಿಯ ಬಿಜೆಪಿ ನಾಯಕರಾದ ಪಿಯೂಷ್ ಗೋಯಲ್ ಮತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ನಿರ್ಣಯವನ್ನು ಗೋವಾ ಸಂಪುಟ ಶುಕ್ರವಾರ ಅಂಗೀಕರಿಸಿದೆ. ಸೋಮವಾರ ಈ ನಿರ್ಣಯವನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಸಾವಂತ್ ಅವರು, ನಿನ್ನೆ ತಮ್ಮ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆ ನಡೆಸಿದರು. ಪ್ರಸ್ತುತ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳುತ್ತದೆ. ಸರ್ಕಾರ ರಚನೆ ಕುರಿತು ಚರ್ಚೆ ನಡೆಸಲು ಕೇಂದ್ರ ವೀಕ್ಷಕರು ಗೋವಾಕ್ಕೆ ಬರಲಿದ್ದಾರೆ. ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕೇಂದ್ರ ವೀಕ್ಷಕರು ನಿರ್ಧರಿಸುತ್ತಾರೆ ಎಂದು ಸಾವಂತ್ ಹೇಳಿದ್ದಾರೆ.
ಮಣಿಪುರದಲ್ಲಿ ಇಂದು ಬೆಳಗ್ಗೆ ಇಂಫಾಲದಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಚರ್ಚೆ ನಡೆಸಿತು. 60 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ 32 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದುಕೊಂಡಿದೆ.
ಪಂಜಾಬ್ನಲ್ಲಿ ಎಎಪಿ ಭಾರಿ ಬಹುಮತ ಪಡೆದ ನಂತರ ಹೊಸ ಸರ್ಕಾರ ರಚಿಸಲು ಸಜ್ಜಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.