ಶ್ರೀನಗರ: ಕಳೆದ 12 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹಕ್ಕೆ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಿಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಅವರು ಮಾಹಿತಿ ನೀಡಿದರು.
ಐಜಿಪಿ ಕಾಶ್ಮೀರ ವಿಜಯ್ ಕುಮಾರ್, “ನಾವು ಕಳೆದ ರಾತ್ರಿ 4-5 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ, ಇದುವರೆಗೆ ಪುಲ್ವಾಮಾದಲ್ಲಿ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್ಬಾಲ್ನಲ್ಲಿ ಎಲ್ಇಟಿಯ ಒಬ್ಬ ಭಯೋತ್ಪಾದಕ ಮತ್ತು ಹಂದ್ವಾರದಲ್ಲಿ ಎಲ್ಇಟಿಯ ಒಬ್ಬ ಭಯೋತ್ಪಾದಕ ಹತರಾಗಿದ್ದಾರೆ” ಎಂದು ಹೇಳಿದರು.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾಕಲನ್ ಗ್ರಾಮದಲ್ಲಿ ನಿನ್ನೆ ಸಂಜೆ ಮೊದಲ ಎನ್ಕೌಂಟರ್ ಪ್ರಾರಂಭವಾಯಿತು, ಅಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಇನ್ನೂ ಇಬ್ಬರು ಉಗ್ರರು ಅಲ್ಲಿ ಸಿಕ್ಕಿಬಿದ್ದಿದ್ದಾರೆ.
#PulwamaEncounterUpdate: 01 more #terrorist of JeM #terror outfit killed (Total=2). Search going on. Further details shall follow. @JmuKmrPolice https://t.co/M2z5ppEc5g
— Kashmir Zone Police (@KashmirPolice) March 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.