ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗ ದರ ಇಳಿಕೆಯಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಅನ್ನು ಉಲ್ಲೇಖಿಸಿದ ಅವರು, 2016 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗ ದರ 20 ಪ್ರತಿಶತ ಇತ್ತು ಮತ್ತು ಈ ವರ್ಷದ ಫೆಬ್ರವರಿ ಅಂತ್ಯದ ವೇಳೆಗೆ 13.2 ಪ್ರತಿಶತದಷ್ಟಿದೆ ಎಂದಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲರೂ ಗೌರವಿಸುವ ಸಂವಿಧಾನವಿರುವ ನಮ್ಮ ದೇಶದಲ್ಲಿ ಎರಡು ಚಿಹ್ನೆಗಳು, ಇಬ್ಬರು ಪ್ರಧಾನ ಮಂತ್ರಿಗಳು ಮತ್ತು ಎರಡು ಸಂವಿಧಾನಗಳು ಇರಲು ಸಾಧ್ಯವಿಲ್ಲ. 370 ನೇ ವಿಧಿಯನ್ನು ತೆಗೆದುಹಾಕುವುದರೊಂದಿಗೆ, ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದಿಂದ ತಾರತಮ್ಯ ಕಾನೂನುಗಳನ್ನು ತೆಗೆದುಹಾಕಲಾಯಿತು ಎಂದು ಅವರು ಪ್ರತಿಪಾದಿಸಿದರು.
ಈ ವರ್ಷದ ಆಗಸ್ಟ್ ವೇಳೆಗೆ ಕಣಿವೆಯ ಪ್ರತಿ ಮನೆಗೂ ಜಲ ಜೀವನ್ ಮಿಷನ್ ಅಡಿಯಲ್ಲಿ ಟ್ಯಾಪ್ ಮೂಲಕ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಸಚಿವರು ಹೇಳಿದರು. ಕಾಶ್ಮೀರಿ ಯುವಕರಿಗೆ ಉದ್ಯೋಗವನ್ನು ಒದಗಿಸುವುದು ನಮ್ಮ ಪ್ರಮುಖ ಕಾಳಜಿಯಾಗಿದೆ ಮತ್ತು ಈ ವರ್ಷದಲ್ಲಿ ಇದು ಕೇಂದ್ರೀಕೃತ ಗಮನವನ್ನು ಪಡೆಯುತ್ತದೆ ಎಂದಿದ್ದಾರೆ.
ನಂತರ, ಸದನದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರ ವಿನಿಯೋಗ ಮಸೂದೆ, 2022 ಮೊದಲು ಮಂಡಿಸಿದರು. 2022-23 ವರ್ಷಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ 1.42-ಲಕ್ಷ ಕೋಟಿ ಬಜೆಟ್ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.