ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಸಂಸತ್ತಿನ ಮೇಲ್ಮನೆಯನ್ನು ಉದ್ದೇಶಿಸಿ ಮಾತನಾಡಿದ್ದು, ರಷ್ಯಾ ಆಕ್ರಮಣದ ನಂತರ ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸಿದ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ.
ಉಕ್ರೇನ್ನಲ್ಲಿ 20,000 ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ನೇರ ಅಪಾಯದಲ್ಲಿದ್ದರು. ಅವರ ಸ್ಥಳಾಂತರಕ್ಕಾಗಿ ಆಪರೇಷನ್ ಗಂಗಾ ಪ್ರಾರಂಭ ಮಾಡಲಾಯಿತು, ಅದರ ಭಾಗವಾಗಿ 22,500 ಭಾರತೀಯರನ್ನು ಮರಳಿ ಕರೆತರಲಾಗಿದೆ ಎಂದರು.
“ವಾಯುದಾಳಿಗಳು ಮತ್ತು ಶೆಲ್ ದಾಳಿಗಳು ಸೇರಿದಂತೆ ಮಿಲಿಟರಿ ಕ್ರಮಗಳು ಇನ್ನೂ ನಡೆಯುತ್ತಿರುವ ಸಮಯದಲ್ಲಿ ಆಪರೇಷನ್ ಗಂಗಾವನ್ನು ಪ್ರಾರಂಭಿಸಲಾಯಿತು. ಇದು ದೊಡ್ಡ ಸವಾಲಿನ ಕಾರ್ಯವಾಗಿತ್ತು. ಅರ್ಧಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ರಷ್ಯಾದ ಗಡಿಯಲ್ಲಿರುವ ಪೂರ್ವ ಉಕ್ರೇನ್ನ ವಿಶ್ವವಿದ್ಯಾಲಯಗಳಲ್ಲಿದ್ದರು ಮತ್ತು ಇದು ಇದುವರೆಗೆ ಸಂಘರ್ಷದ ಕೇಂದ್ರಬಿಂದುವಾಗಿದೆ ಎಂದು ಜೈಶಂಕರ್ ಹೇಳಿದರು.
ಕೇರಳ, ಯುಪಿ, ಹರಿಯಾಣ, ತಮಿಳುನಾಡು, ಗುಜರಾತ್, ಮಹಾರಾಷ್ಟ್ರ, ಬಿಹಾರ ಮತ್ತು ರಾಜಸ್ಥಾನದಿಂದ ತಲಾ 1000 ವಿದ್ಯಾರ್ಥಿಗಳೊಂದಿಗೆ ಭಾರತದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಿಕ್ಕಿಬಿದ್ದ ವಿದ್ಯಾರ್ಥಿಗಳು ಬಂದಿದ್ದಾರೆ ಎಂದು ಹೇಳಿದ್ದಾರೆ.
ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಜನವರಿಯಲ್ಲಿ ನೋಂದಣಿ ಅಭಿಯಾನವನ್ನು ಪ್ರಾರಂಭಿಸುವುದರೊಂದಿಗೆ ಕಾರ್ಯಾಚರಣೆ ಆರಂಭವಾಯಿತು ಎಂದಿದ್ದಾರೆ.
ಉಕ್ರೇನ್ – ರಷ್ಯಾ ಸಂಘರ್ಷದಲ್ಲಿ ಭಾರತದ ನಿಲುವು ಸ್ಥಿರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.