ಬೆಂಗಳೂರು: ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ ಅವರ 47 ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವು.ಅವರನ್ನು ಕಳೆದುಕೊಂಡು ದುಃಖದಲ್ಲಿದ್ದರೂ ಕೂಡ ಅವರ ಬದುಕು ನಮಗೆ ಸ್ಫೂರ್ತಿಯಾಗಿದೆ ಎಂದರು.
ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿಗಳು ಶುಭಾಶಯಗಳನ್ನು ಕೋರಿದರು.
ಪುನೀತ್ ಅವರಿಗೆ ಮರಣೋತ್ತರ ವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆದಷ್ಟು ಶೀಘ್ರವಾಗಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಪುನೀತ ಹಾಗೂ ಡಾ: ರಾಜ್ ಕುಮಾರ್ ಅವರಿಗೆ ಗೌರವ ಬರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿಯನ್ನು ರಚಿಸಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.