ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನ ಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
2022-23 ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1 ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಖುದ್ದು ಎಲ್ಲ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಯವರು, ಆಯವ್ಯಯ ದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಈ ಕುರಿತು ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧ ಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸೂಚಿಸಿದ್ದಾರೆ.
ಅಲ್ಲದೆ, ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.