ನವದೆಹಲಿ: 2022-23ನೇ ಶೈಕ್ಷಣಿಕ ವರ್ಷದಿಂದ ಗುಜರಾತ್ನ ಎಲ್ಲಾ ಶಾಲೆಗಳಲ್ಲಿ 6-12ನೇ ತರಗತಿಗಳಿಗೆ ಪಠ್ಯಕ್ರಮದ ಭಾಗವಾಗಿ ಭಗವದ್ಗೀತೆಯನ್ನು ಪರಿಚಯಿಸಲಾಗುವುದು ಎಂದು ಅಲ್ಲಿನ ರಾಜ್ಯ ವಿಧಾನಸಭೆಯಲ್ಲಿ ಘೋಷಿಸಲಾಗಿದೆ.
ಶಿಕ್ಷಣ ಸಚಿವ ಜಿತು ವಘಾನಿ ಅವರು ಶಿಕ್ಷಣ ಇಲಾಖೆಗೆ ಬಜೆಟ್ನಲ್ಲಿ ಮೀಸಲಿಡುವ ಕುರಿತ ಚರ್ಚೆಯ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಭಗವದ್ಗೀತೆಯನ್ನು ಪರಿಚಯಿಸುವ ನಿರ್ಧಾರವು ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯೊಂದಿಗೆ (NEP) ಹೊಂದಿಕೆಯಾಗುತ್ತದೆ, ಇದು ಆರಂಭಿಕ ಹಂತದಿಂದ ಮಕ್ಕಳಲ್ಲಿ ಪ್ರಾಚೀನ ಸಂಸ್ಕೃತಿಗಳು ಮತ್ತು ಆಧುನಿಕ ಸಂಪ್ರದಾಯಗಳನ್ನು ಅಳವಡಿಸಲು ಪ್ರತಿಪಾದಿಸುತ್ತದೆ ಎಂದಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಘಾನಿ, ಪ್ರಾಚೀನ ಹಿಂದೂ ಧರ್ಮಗ್ರಂಥದಲ್ಲಿ ವಿವರಿಸಿರುವ ನೈತಿಕ ಮೌಲ್ಯಗಳು ಮತ್ತು ತತ್ವಗಳನ್ನು ಎಲ್ಲಾ ಧರ್ಮಗಳ ಜನರು ಒಪ್ಪಿಕೊಂಡಿದ್ದಾರೆ. ಆದ್ದರಿಂದ, 6 ರಿಂದ 12 ನೇ ತರಗತಿಯ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸಲು ನಾವು ನಿರ್ಧರಿಸಿದ್ದೇವೆ. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಸರ್ವಂಗಿ ಶಿಕ್ಷಣ’ (ಸಮಗ್ರ ಶಿಕ್ಷಣ) ಪಠ್ಯಪುಸ್ತಕದಲ್ಲಿ ಗ್ರಂಥವನ್ನು ಪರಿಚಯಿಸಲಾಗುವುದು. 9 – 12ನೇ ತರಗತಿಯವರೆಗೆ ಪ್ರಥಮ ಭಾಷೆಯ ಪಠ್ಯಪುಸ್ತಕದಲ್ಲಿ ಕಥೆ ಹೇಳುವ ರೂಪದಲ್ಲಿ ಪರಿಚಯಿಸಲಾಗುವುದು,’’ ಎಂದರು.
ಶಾಲೆಗಳಲ್ಲಿ ಪ್ರಾರ್ಥನೆ, ಶ್ಲೋಕ ಪಠಣ, ಗ್ರಹಿಕೆ, ನಾಟಕ, ರಸಪ್ರಶ್ನೆ, ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳಂತಹ ಚಟುವಟಿಕೆಗಳನ್ನು ಸಹ ಆಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.