ನವದೆಹಲಿ: ʼದಿ ಕಾಶ್ಮೀರ್ ಫೈಲ್ಸ್ʼನ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರಿಗೆ ವೈ-ಕೆಟಗರಿ ಭದ್ರತೆಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ದೇಶವ್ಯಾಪಿಯಾಗಿ ಸಿಆರ್ಪಿಎಫ್ ಭದ್ರತೆ ದೊರೆಯಲಿದೆ.
ಮೂಲಗಳ ಪ್ರಕಾರ, ದಿ ಕಾಶ್ಮೀರ್ ಫೈಲ್ಸ್ ಚಿತ್ರಬಿಡುಗಡೆಯಾದ ನಂತರ ನಿರ್ದೇಶಕರಿಗೆ ಬರುತ್ತಿರುವ ಬೆದರಿಕೆಯನ್ನು ಆಧರಿಸಿ ಭದ್ರತೆಯನ್ನು ಒದಗಿಸಲಾಗಿದೆ.
ವೈ-ಕೆಟಗರಿ ಭದ್ರತೆಯಡಿಯಲ್ಲಿ, ಅಗ್ನಿಹೋತ್ರಿ ಅವರಿಗೆ ಎಂಟು ಅಧಿಕಾರಿಗಳ ಭದ್ರತೆಯನ್ನು ಒದಗಿಸಲಾಗುತ್ತದೆ, ಇದರಲ್ಲಿ ಇಬ್ಬರು ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.
ಕಾಶ್ಮೀರಿ ಪಂಡಿತರು ಅನುಭವಿಸಿದ ಕ್ರೌರ್ಯಗಳನ್ನು ಮತ್ತು 1990 ರ ದಶಕದಲ್ಲಿ ಕಣಿವೆಯಿಂದ ಸಮುದಾಯದ ಸಾಮೂಹಿಕ ವಲಸೆಯನ್ನು ದಿ ಕಾಶ್ಮೀರ ಫೈಲ್ಸ್ ಜನತೆಯ ಮುಂದೆ ತೆರೆದಿಟ್ಟಿದೆ.
ಈ ಸಿನಿಮಾಗೆ ಎಲ್ಲಾ ಕಡೆಯಿಂದಲೂ ಬೆಂಬಲ ವ್ಯಕ್ತವಾಗಿದೆ. ಅನೇಕ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿಗಳನ್ನು ವಿಸ್ತರಿಸಲಾಗಿದೆ. ಈ ಚಿತ್ರವು ಪ್ರಧಾನಿ ನರೇಂದ್ರ ಮೋದಿಯವರ ಪ್ರಶಂಸೆಯನ್ನು ಸಹ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.