ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಲಯಾಳಂ ದೈನಿಕ ʼಮಾತೃಭೂಮಿʼಯ ಶತಮಾನೋತ್ಸವ ವರ್ಷಾಚರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಸಮಾರಂಭದಲ್ಲಿ ಮಾತನಾಡಿದ ಅವರು, ಪತ್ರಿಕೆಯ ಪಯಣದಲ್ಲಿನ ಎಲ್ಲಾ ಪ್ರಮುಖ ವ್ಯಕ್ತಿಗಳಿಗೆ ನಮನ ಸಲ್ಲಿಸಿದರು ಮತ್ತು ಪತ್ರಿಕೆಯು ಮಹಾತ್ಮ ಗಾಂಧಿಯವರಿಂದ ಪ್ರೇರಣೆ ಪಡೆದುಕೊಂಡಿದೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಲಪಡಿಸುವ ಸಲುವಾಗಿ ಹುಟ್ಟಿದೆ ಎಂದು ಹೇಳಿದರು.
ʼಮಾತೃಭೂಮಿʼಯು ವಸಾಹತುಶಾಹಿ ಆಡಳಿತದ ವಿರುದ್ಧ ನಮ್ಮ ರಾಷ್ಟ್ರದ ಜನರನ್ನು ಒಗ್ಗೂಡಿಸಲು ಭಾರತದಾದ್ಯಂತ ಸ್ಥಾಪಿಸಲಾದ ಪತ್ರಿಕೆಗಳು ಮತ್ತು ನಿಯತಕಾಲಿಕಗಳ ವೈಭವದ ಪ್ರಮುಖ ಭಾಗವಾಗಿದೆ ಎಂದು ಅವರು ಹೇಳಿದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಇಂದಿನ ಪೀಳಿಗೆಯ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಅವಕಾಶವನ್ನು ಪಡೆಯಲಿಲ್ಲ, ಆದರೆ ಈ ಅಮೃತ ಕಾಲವು ನಮಗೆ ಬಲಿಷ್ಠ, ಅಭಿವೃದ್ಧಿ ಹೊಂದಿದ ಮತ್ತು ಎಲ್ಲರನ್ನೂ ಒಳಗೊಳ್ಳುವ ಭಾರತಕ್ಕಾಗಿ ಕೆಲಸ ಮಾಡುವ ಅವಕಾಶವನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು.
ನವಭಾರತದ ಪ್ರಚಾರಗಳ ಮೇಲೆ ಮಾಧ್ಯಮಗಳ ಧನಾತ್ಮಕ ಪ್ರಭಾವದ ಕುರಿತು ಪ್ರಧಾನಮಂತ್ರಿಯವರು ವಿವರಿಸಿದರು. ಸ್ವಚ್ಛ ಭಾರತ್ ಮಿಷನ್ನ ಉದಾಹರಣೆಯನ್ನು ಅವರು ನೀಡಿದರು, “ಪ್ರತಿ ಮಾಧ್ಯಮ ಸಂಸ್ಥೆಯು ಈ ಕಾರ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡಿತು. ಯೋಗ, ಫಿಟ್ನೆಸ್ ಮತ್ತು ಬೇಟಿ ಬಚಾವೋ ಬೇಟಿ ಪಢಾವೋವನ್ನು ಜನಪ್ರಿಯಗೊಳಿಸುವಲ್ಲಿ ಮಾಧ್ಯಮಗಳು ಬಹಳ ಪ್ರೋತ್ಸಾಹದಾಯಕ ಪಾತ್ರವನ್ನು ವಹಿಸಿವೆ” ಎಂದು ಪ್ರಧಾನಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.