ಬೆಂಗಳೂರು: ಕರ್ನಾಟಕದ ಯಾವುದೇ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ಯಮಿಗಳಿಗೆ 24 ಗಂಟೆಯೊಳಗೆ ಜಮೀನು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ಸರಕಾರ ಬದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಬಂಡವಾಳ ಹೂಡಿಕೆ ಮಾಡಲು ಇಚ್ಛಿಸುವ ಮತ್ತು ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕ್ಷಿಪ್ರಗತಿಯಲ್ಲಿ ಕಲ್ಪಿಸಿಕೊಡಲು ನಾವು ಬದ್ಧರಾಗಿದ್ದೇವೆ” ಎಂದಿದ್ದಾರೆ.
ಸಮಗ್ರ ಕೈಗಾರಿಕೆ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಯಲ್ಲೂ ಸಾವಿರ ಎಕರೆ ಹಾಗೂ ತಾಲೂಕು ಮಟ್ಟದಲ್ಲಿ ನೂರು ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿ ಮೀಸಲಿಡಲು ನಮ್ಮ ಸರಕಾರ ನಿರ್ಧಾರ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಲ್ಲದೇ ರಾಜ್ಯದಲ್ಲಿ ಪ್ರಾರಂಭವಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇಕಡ 70 ರಷ್ಟು ಉದ್ಯೋಗ ಕೊಡಬೇಕೆಂಬ ನಿಯಮದಲ್ಲಿ ನಾವು ಯಾವುದೇ ರಾಜಿ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.