ನವದೆಹಲಿ: ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಪುನಃ ತೆರೆಯುವಂತೆ ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಹತ್ಯೆಗಳ ಮರು ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ)ಯನ್ನು ರಚನೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
1989-1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಪ್ರಕರಣಗಳ ಮರು ತನಿಖೆ ಮಾಡುವಂತೆ ಮತ್ತು ತನಿಖೆಗಾಗಿ ಎಸ್ಐಟಿಯನ್ನು ಪುನರಾರಂಭಿಸುವಂತೆ ಕೋರಿ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
ಎಸ್ಐಟಿಯು ಇಲ್ಲಿಯವರೆಗೆ ವರದಿಯಾಗಿರುವ ಪ್ರಕರಣಗಳನ್ನು ಕೂಲಂಕುಷವಾಗಿ ತನಿಖೆ ನಡೆಸಬೇಕು ಮತ್ತು ನ್ಯಾಯವನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಿಂದೆ ಇದ್ದ ಪ್ರತಿಕೂಲ ಪರಿಸ್ಥಿತಿಗಳಿಂದಾಗಿ ತಮ್ಮ ಪ್ರಕರಣಗಳನ್ನು ವರದಿ ಮಾಡಲು ಸಾಧ್ಯವಾಗದ ಸಂತ್ರಸ್ತರಿಗೆ ವೇದಿಕೆ ಒದಗಿಸಬೇಕು ಎಂದು ಜಿಂದಾಲ್ ರಾಷ್ಟ್ರಪತಿಯನ್ನು ಒತ್ತಾಯಿಸಿದರು.
“33 ವರ್ಷಗಳ ಹಿಂದೆ ನಡೆದ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದ ವಿಷಯಗಳನ್ನು ಮತ್ತೆ ತೆರೆಯಬಹುದಾದರೆ ಮತ್ತು ಮರು ತನಿಖೆ ನಡೆಸಬಹುದಾದರೆ, 27 ವರ್ಷಗಳ ಹಿಂದೆ ನಡೆದ ಕಾಶ್ಮೀರಿ ಪಂಡಿತರ ಪ್ರಕರಣಗಳನ್ನೂ ಯಾಕೆ ಮರು ತನಿಖೆ ನಡೆಸಬಾರದು?” ಎಂದು ಅವರು ಪ್ರತಿಪಾದಿಸಿದ್ದಾರೆ.
“ಘಟನೆಗಳ ಸಂತ್ರಸ್ತರು ದೈಹಿಕ, ಭಾವನಾತ್ಮಕ ಮತ್ತು ಮಾನಸಿಕ ಆಘಾತದ ಸ್ಥಿತಿಯಲ್ಲಿದ್ದಾರೆ ಮತ್ತು ಕಳೆದ ಹಲವು ವರ್ಷಗಳಿಂದ ತಮ್ಮ ಜೀವನೋಪಾಯಕ್ಕಾಗಿ ಹೆಣಗಾಡುತ್ತಿದ್ದಾರೆ ಮತ್ತು ಅವರು ತಮ್ಮ ದೂರುಗಳನ್ನು ದಾಖಲಿಸುವ, ಹೇಳಿಕೆಗಳನ್ನು ದಾಖಲಿಸುವ ಸ್ಥಿತಿಯಲ್ಲಿಲ್ಲ” ಎಂದು ಪತ್ರದಲ್ಲಿ ಜಿಂದಾಲ್ ವಿವರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.