ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತದ ಭೂಪ್ರದೇಶಕ್ಕೆ ಮರು-ಸಂಯೋಜಿಸುವ ಗುರಿಯಲ್ಲಿ ಬಿಜೆಪಿ ಸರ್ಕಾರವು ದೃಢವಾಗಿದೆ ಎಂದು ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಭಾನುವಾರ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮಹಾರಾಜ ಗುಲಾಬ್ ಸಿಂಗ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “1994 ರಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದದ ಏಕೈಕ ಅಂಶ ಪಿಒಕೆ ಎಂದು ಪ್ರಧಾನಿ ನರಸಿಂಹರಾವ್ ನೇತೃತ್ವದಲ್ಲಿ ಭಾರತೀಯ ಸಂಸತ್ತು ನಿರ್ಣಯವನ್ನು ಅಂಗೀಕರಿಸಿತ್ತು” ಎಂದಿದ್ದಾರೆ.
“ಪಾಕಿಸ್ತಾನದ ಅಕ್ರಮ ಆಕ್ರಮಣದ ಅಡಿಯಲ್ಲಿ ಇನ್ನೂ ಉಳಿದಿರುವ ಜಮ್ಮು ಮತ್ತು ಕಾಶ್ಮೀರದ ಭಾಗವನ್ನು ಭಾರತದ ಭೂಪ್ರದೇಶಕ್ಕೆ ಮರು-ಸಂಯೋಜಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಸಿಂಗ್ ಒತ್ತಿ ಹೇಳಿದ್ದಾರೆ.
“ಬಿಜೆಪಿ ಏನನ್ನಾದರೂ ಸಾಧಿಸಲು ಹೊರಟಾಗ, ಅನೇಕರು ನಮ್ಮನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಅಥವಾ ಅದರ ಬಗ್ಗೆ ಆಳವಾಗಿ ಯೋಚಿಸುವುದಿಲ್ಲ. ನಾವು 370 ನೇ ವಿಧಿಯ ರದ್ದತಿಯ ಬಗ್ಗೆ ಮಾತನಾಡುವಾಗ, ಅನೇಕರು ನಮ್ಮ ಬಗ್ಗೆ ತಮಾಷೆ ಮಾಡುತ್ತಿದ್ದರು. ಆದರೆ, ಅದು ವಾಸ್ತವಕ್ಕೆ ತಿರುಗುವುದನ್ನು ನೀವೆಲ್ಲಾ ನೋಡಿದ್ದೀರಿ” ಎಂದಿದ್ದಾರೆ.
#WATCH| Parliament passed a resolution unanimously in 1994, emphasizing that Pakistan must vacate parts of J&K under its illegal occupation. It is our promise to liberate PoJK, Union Min Jitendra Singh said after unveiling a 20-ft statue of Maharaja Gulab Singh in Kathua (20.03) pic.twitter.com/LW0puAyzuI
— ANI (@ANI) March 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.