ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ಬಗೆಗೆ ಭಾರತ ಅನುಸರಿಸಿರುವ ವಿಧಾನವನ್ನು ಅನುಮೋದಿಸಿರುವ ಆಸ್ಟ್ರೇಲಿಯವು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಲ್ಲಾ ಸಂಪರ್ಕಗಳನ್ನು ಬಳಸಿ ಸಂಘರ್ಷವನ್ನು ಕೊನೆಗೊಳಿಸಲು ಪ್ರಯತ್ನಿಸಿದ್ದಾರೆ ಎಂಬುದನ್ನು ಒಪ್ಪಿಕೊಂಡಿದೆ.
ರಷ್ಯಾದ ಆಕ್ರಮಣವನ್ನು ಸಾರಾಸಗಟಾಗಿ ಖಂಡಿಸಲು ಮತ್ತು ಯುಎನ್ ಸೆಕ್ಯುರಿಟಿ ಕೌನ್ಸಿಲ್ ಮತ್ತು ಯುಎನ್ ಜನರಲ್ ಅಸೆಂಬ್ಲಿಯಲ್ಲಿ ರಷ್ಯಾ-ಉಕ್ರೇನ್ ಯುದ್ಧದ ಕುರಿತು ಮಂಡಿಸಲಾದ ನಿರ್ಣಯಗಳಿಂದ ದೂರವಿರಲು ಭಾರತ ನಿರ್ಧರಿಸಿದ ಬಗ್ಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಸಮಾಧಾನ ಉದ್ಭವಿಸಿರುವ ನಡುವೆ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತದಲ್ಲಿರುವ ಆಸ್ಟ್ರೇಲಿಯಾದ ಹೈ ಕಮಿಷನರ್ ಬ್ಯಾರಿ ಓ’ಫಾರೆಲ್ ಅವರು. ಕೇಂದ್ರದ ನಿಲುವನ್ನು ಕ್ವಾಡ್ ಒಪ್ಪಿಕೊಂಡಿದೆ ಎಂದು ಬಹಿರಂಗಪಡಿಸಿದರು. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾದ ಆಕ್ರಮಣಕಾರಿ ವರ್ತನೆಯನ್ನು ಎದುರಿಸಲು ಭಾರತ, ಆಸ್ಟ್ರೇಲಿಯಾ, ಯುಎಸ್ ಮತ್ತು ಜಪಾನ್ ‘ಕ್ವಾಡ್’ ಒಕ್ಕೂಟವನ್ನು ರಚಿಸಿವೆ.
“ಕ್ವಾಡ್ ರಾಷ್ಟ್ರಗಳು ಭಾರತದ ನಿಲುವನ್ನು ಒಪ್ಪಿಕೊಂಡಿವೆ. ಪ್ರತಿಯೊಂದು ದೇಶವೂ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಗಳಿಂದ ಅವರು ತಮ್ಮ ಸಂಪರ್ಕಗಳನ್ನು ಬಳಸಿ ಸಂಘರ್ಷ ಅಂತ್ಯಕ್ಕೆ ಪ್ರಯತ್ನಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ” ಎಂದು ಬ್ಯಾರಿ ಓ’ಫಾರೆಲ್ ಹೇಳಿದ್ದಾರೆ.
ಸೋಮವಾರ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರೊಂದಿಗಿನ ಪ್ರಧಾನಿ ಮೋದಿಯವರ ವರ್ಚುವಲ್ ಶೃಂಗಸಭೆಯಲ್ಲಿ ಉಕ್ರೇನ್ನಲ್ಲಿನ ಯುದ್ಧವು ಚರ್ಚೆಗೆ ಬರಬಹುದಾಗಿರುವುದರಿಂದ ಈ ಹೇಳಿಕೆಗಳು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.