ಬೆಂಗಳೂರು: ಹಿಜಾಬ್ ಪರವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಪಿಯು ವಿದ್ಯಾರ್ಥಿಗಳು ಫೆಬ್ರವರಿ-ಮಾರ್ಚ್ನಲ್ಲಿ ನಡೆದ ಪರೀಕ್ಷೆಗಳಿಗೆ ಹಾಜರಾಗಿಲ್ಲ. ಅಂತವರಿಗೆ ಪರೀಕ್ಷೆಗಳನ್ನು ಬರೆಯಲು ಮತ್ತೊಂದು ಅವಕಾಶ ಸಿಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದ ಕೆಲವು ದಿನಗಳ ನಂತರ ಈ ಸ್ಪಷ್ಟನೆ ನೀಡಲಾಗಿದೆ.
ಈ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಈ ಸಾಧ್ಯತೆಯನ್ನು ನಾವು ಹೇಗೆ ಪರಿಗಣಿಸುವುದು? ಹೈಕೋರ್ಟಿನ ಮಧ್ಯಂತರ ಆದೇಶದ ನಂತರವೂ ಹಿಜಾಬ್ ಬೇಕು ಎಂದು ಪ್ರಾಕ್ಟಿಕಲ್ ಬಹಿಷ್ಕರಿಸುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರೆ ಮತ್ತೊಬ್ಬ ವಿದ್ಯಾರ್ಥಿ ಬೇರೆ ಕಾರಣಕ್ಕೆ ಬಂದು ಎರಡನೇ ಅವಕಾಶ ಕೇಳುತ್ತಾನೆ. ಇದು ಅಸಾಧ್ಯ” ಎಂದಿದ್ದಾರೆ.
ಆದರೆ, ಕೆಲವು ದಿನಗಳ ಹಿಂದೆ ರಾಜ್ಯ ಸರ್ಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಎರಡನೇ ಅವಕಾಶ ನೀಡುವ ಬಗ್ಗೆ ಸುಳಿವು ನೀಡಿತ್ತು, ಆದರೆ ನಿನ್ನೆ ಅದು ಆ ಆಯ್ಕೆಯನ್ನು ತಿರಸ್ಕರಿಸಿದೆ.
ಈ ಹಿಂದೆ, ಫೆಬ್ರವರಿ 28 ರಿಂದ ಪ್ರಾರಂಭವಾಗಬೇಕಿದ್ದ ತಮ್ಮ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಪೂರ್ವ ವಿಶ್ವವಿದ್ಯಾಲಯ ಮಂಡಳಿಯನ್ನು ಒತ್ತಾಯಿಸಿದ್ದರು.
ಸ್ಕಾರ್ಫ್ ಧರಿಸಿದ್ದಕ್ಕಾಗಿ ಶಾಲೆಯ ಆವರಣದೊಳಗೆ ಪ್ರವೇಶ ನಿರಾಕರಿಸಿದ್ದರಿಂದ ಕಳೆದ ಎರಡು ತಿಂಗಳಿನಿಂದ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹಲವು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.