ನವದೆಹಲಿ: ಭಾರತ-ಆಸ್ಟ್ರೇಲಿಯಾ ಎರಡನೇ ವರ್ಚುವಲ್ ಶೃಂಗಸಭೆ ಇಂದು ನಡೆಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅವರ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ವಿವಿಧ ಉಪಕ್ರಮಗಳಲ್ಲಿ ಸಾಧಿಸಲಾದದ ಪ್ರಗತಿಯನ್ನು ಪರಿಶೀಲಿಸಿದರು.
ನಾಯಕರು ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಶೃಂಗಸಭೆಯ ಉದ್ಘಾಟನಾ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಂಬಂಧವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಹೇಳಿದರು. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಶಿಕ್ಷಣ ಮತ್ತು ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಎರಡೂ ರಾಷ್ಟ್ರಗಳು ನಿಕಟ ಸಹಕಾರವನ್ನು ಹೊಂದಿವೆ ಎಂದು ಅವರು ಹೇಳಿದರು.
ನಿರ್ಣಾಯಕ ಖನಿಜಗಳು, ನೀರು ನಿರ್ವಹಣೆ, ನವೀಕರಿಸಬಹುದಾದ ಇಂಧನ ಮತ್ತು ಕೋವಿಡ್ -19 ಸಂಶೋಧನೆಯಂತಹ ಇತರ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವು ವೇಗವಾಗಿ ಬೆಳೆದಿದೆ ಎಂದು ಮೋದಿ ಹೇಳಿದರು.
ಬೆಂಗಳೂರಿನಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನ ನೀತಿಗಾಗಿ ಎಕ್ಸಲೆಂಟ್ ಸೆಂಟರ್ ಸ್ಥಾಪನೆಯ ಘೋಷಣೆಯನ್ನು ಅವರು ಸ್ವಾಗತಿಸಿದರು.
ಉಭಯ ನಾಯಕರು ದ್ವಿಪಕ್ಷೀಯ ಬಾಂಧವ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ ಮತ್ತು ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮಾಹಿತಿ ನೀಡಿದ್ದಾರೆ.
ನಾಯಕರು ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಭಯೋತ್ಪಾದನೆಯಂತಹ ಹಂಚಿಕೆಯ ಕಾಳಜಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು ಎಂದಿದ್ದಾರೆ.
ಪ್ರಾಚೀನ ಭಾರತೀಯ ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಉಪಕ್ರಮವನ್ನು ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.