ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವ ಸಲುವಾಗಿ ಶೀಘ್ರದಲ್ಲಿ ಸೈಬರ್ ಭದ್ರತಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಅಸೋಚಂ ವತಿಯಿಂದ ವರ್ಚುವಲ್ ಆಗಿ ಆಯೋಜಿಸಲಾದ 2 ದಿನಗಳ 12ನೇ ಜಾಗತಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಜಿಟಲ್ ಆರ್ಥಿಕತೆಯ ಸುಸ್ಥಿರತೆಗೆ ಸುರಕ್ಷತೆ, ಭದ್ರತೆ ಮತ್ತು ವಿಶ್ವಾಸಾರ್ಹತೆಗಳು ಆಧಾರಸ್ತಂಭಗಳಾಗಿವೆ. ಹೀಗಾಗಿ ಸೈಬರ್ ಅಪರಾಧಗಳನ್ನು ತಗ್ಗಿಸಲು ಸೈಬರ್ ಭದ್ರತಾ ನೀತಿಯನ್ನು ಶೀಘ್ರದಲ್ಲೇ ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿದ್ದಾರೆ.
ಸೈಬರ್ ಭದ್ರತಾ ನೀತಿಯ ಎಲ್ಲಾ ಆಯಾಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಿದೆ. ಈ ನೀತಿ ಅನುಷ್ಠಾನಕ್ಕೆ ಬಂದ ಬಳಿಕ ಸರಕಾರದ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಪನ್ಮೂಲಗಳಾದ ರಾಜ್ಯ ದತ್ತಾಂಶ ಕೇಂದ್ರ, ವೈಟ್ ಏರಿಯಾ ನೆಟ್ವರ್ಕ್ ಮತ್ತು ಇ-ಆಡಳಿತ ಸೌಲಭ್ಯಗಳು ಸುರಕ್ಷಿತವಾಗಿರಲಿದೆ ಎಂದಿದ್ದಾರೆ.
ಖಾಸಗಿ ಬ್ಯಾಂಕುಗಳಲ್ಲಿ ಕಾರ್ಡ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ವಂಚನೆಗಳು ಯಥೇಚ್ಛವಾಗಿ ನಡೆಯುತ್ತಿದೆ. ಇವುಗಳನ್ನು ತಡೆಗಟ್ಟಬೇಕಾಗಿರುವುದು ಇಂದಿನ ಅಗತ್ಯವಾಗಿದೆ. ಭಾರತೀಯ ಡೇಟಾ ಸುರಕ್ಷತೆ ಮಂಡಳಿಯ ಪ್ರಕಾರ, ಸೈಬರ್ ಭದ್ರತಾ ಉದ್ಯಮವು ಸದ್ಯಕ್ಕೆ 80 ಶತಕೋಟಿ ಡಾಲರ್ ಮೌಲ್ಯವನ್ನು ಹೊಂದಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದು 190 ಶತಕೋಟಿ ಡಾಲರ್ಗೆ ಬೆಳೆಯಲಿದೆ. ಹೀಗಾಗಿ ಈ ಉದ್ಯಮವನ್ನು ಸುರಕ್ಷತೆಯೊಂದಿಗೆ ಬೆಳೆಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ ಎಂದಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.