ಬೆಂಗಳೂರು: ಕರ್ನಾಟಕದಲ್ಲಿ ಕ್ರೀಡೆಯ ಬೆಳವಣಿಗೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡುವುದಾಗಿ ಕ್ರೀಡಾ ಸಚಿವ ಕೆ ಸಿ ನಾರಾಯಣಗೌಡ ಅವರು ಘೋಷಣೆ ಮಾಡಿದ್ದಾರೆ.
ಎಲ್ಲಾ ಕ್ರೀಡೆಗಳು ಒಂದೇ ಭಾಗದಲ್ಲಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಯಲಹಂಕ ಬಳಿಯಲ್ಲಿ 100 ಎಕರೆ ಜಾಗವನ್ನು ಗುರುತಿಸಿ ಅಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 35 ಕ್ರೀಡಾ ವಸತಿ ನಿಲಯಗಳನ್ನು ಸ್ಥಾಪನೆ ಮಾಡಲಾಗುತ್ತಿದೆ, ಇದರಲ್ಲಿ 15 ವಸತಿ ನಿಲಯಗಳನ್ನು ಮಹಿಳೆಯರಿಗಾಗಿ ಮೀಸಲಿಡಲು ನಿರ್ಧಾರ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ ತರಬೇತುದಾರರನ್ನು ಶೀಘ್ರ ಭರ್ತಿ ಮಾಡಿ ಕೊಳ್ಳಲಾಗುವುದು, ಅವರಿಗೆ ಕೊಡುತ್ತಿರುವುದು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗುವುದು ಎಂಬ ಭರವಸೆಯನ್ನು ಕೂಡ ಅವರು ನೀಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಮ್ಯೂಸಿಯಂ ಸ್ಥಾಪನೆ ಮಾಡಲಾಗುವುದು, ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಎಲ್ಲಾ ಸಾಧನೆಗಳನ್ನು ಇಲ್ಲಿ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಕ್ರೀಡಾಪಟುಗಳಿಗೆ ಶೇ. 75ರಷ್ಟು ಹಾಜರಾತಿ ಮಾಫಿ ಮಾಡುವುದಕ್ಕೆ ಅವಕಾಶ ನೀಡಬೇಕು. ಫಲಿತಾಂಶಗಳಲ್ಲಿ ಗ್ರೇಸ್ ಅಂಕಗಳಾಗಿ 10 ಅಂಕಗಳನ್ನು ನೀಡಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.