ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಿದೆ. ಸಂಪೂರ್ಣವಾಗಿ ಉಚಿತವಾಗಿ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು, “ಸದ್ಯಕ್ಕೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೊಂದಣಿ ಮಾಡಿಕೊಳ್ಳುತ್ತಿಲ್ಲ. ಆದರೆ ಅವರ ಕಲಿಕೆ ತರಬೇತಿಯನ್ನು ಇಲ್ಲಿ ಮುಂದುವರೆಸಲಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉಚಿತವಾಗಿ ಶಿಕ್ಷಣವನ್ನು ಮುಂದುವರಿಸಬಹುದು” ಎಂದಿದ್ದಾರೆ.
ಸೋಮವಾರ ಸಚಿವರು ವಿಧಾನಸೌಧದಲ್ಲಿ ಉಕ್ರೇನ್ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಘೋಷಣೆ ಮಾಡಿದ್ದಾರೆ.
ಈ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತಮಟ್ಟದ ಸಮಿತಿ ರಚಿಸಲು ನಿರ್ಧಾರ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ಬಳಿಕ 572ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ ಎಂದಿದ್ದಾರೆ. ಇವರ ಪೈಕಿ ಮೊದಲ ವರ್ಷದಿಂದ ಆರಂಭವಾಗಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಇದ್ದಾರೆ. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿದ್ದು, ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರೆಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Our government has decided to permit Ukraine-returned medical students to participate in classes and clinical training in the State’s medical colleges until a final decision is taken by the National Medical Council (NMC). 1/3@mansukhmandviya@BSBommai@NMC_IND #Ukraine pic.twitter.com/FrFJfboZbg
— Dr Sudhakar K (@mla_sudhakar) March 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.