ನವದೆಹಲಿ: ದೇಶದ 7,000 ಹಳ್ಳಿಗಳಿಗೆ ಬ್ರಾಡ್ಬ್ಯಾಂಡ್ ಮತ್ತು 4G ಸಂಪರ್ಕವನ್ನು ಸಕ್ರಿಯಗೊಳಿಸಲು ಐಟಿ ಸಚಿವಾಲಯವು ಸರಿಸುಮಾರು 6,500 ಕೋಟಿ ರೂಪಾಯಿಗಳ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಇಂದು ಹೇಳಿದ್ದಾರೆ.
ದೇಶದ ಬುಡಕಟ್ಟು ಜನಸಂಖ್ಯೆಗೆ ಇಂಟರ್ನೆಟ್ ಸಂಪರ್ಕದ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಮುಂಡಾ, ಲೋಕಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.
ಅಲ್ಲದೇ, ಬಿಜೆಡಿ ಸಂಸದ ಅನುಭವ್ ಮೊಹಂತಿ ಅವರು ಬುಡಕಟ್ಟು ಜನಾಂಗದವರನ್ನು ಪ್ರಮುಖವಾಗಿ ಬಾಧಿಸುವ ರೋಗ (sickle disease) ದ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದರು. ರೋಗವನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ವಿಧಾನಗಳಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದಾದರೂ ಕ್ರಮ ತೆಗೆದುಕೊಂಡಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಮುಂಡಾ ಅವರು, ತಮ್ಮ ಸಚಿವಾಲಯವು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಆರೋಗ್ಯ ಸಚಿವಾಲಯದೊಂದಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಸಂಶೋಧನೆ ಮತ್ತು ಡೇಟಾಬೇಸ್ನ ರಚನೆ ಎಂಬ ಎರಡು ರಂಗಗಳಲ್ಲಿ ಅವರು ರೋಗ ನಿಯಂತ್ರಣಕ್ಕೆ ವಿಧಾನವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು.
ರೋಗಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಮತ್ತು ಜಾಗೃತಿ ಮೂಡಿಸುವುದು ಮುಖ್ಯ. ಚಿಕಿತ್ಸೆಗಳನ್ನು ಸುಲಭವಾಗಿ ಪ್ರವೇಶಿಸಲು ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು. ಬುಡಕಟ್ಟು ಜನಾಂಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರವು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ ಘಟಕ (ಎಸ್ಟಿಸಿ) ಅಭಿವೃದ್ಧಿ ಕ್ರಿಯಾ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.