ಬೆಂಗಳೂರು: ಬಯಾಥ್ಲಾನ್ ಚಾಂಪಿಯನ್ ಶಿಪ್ನಲ್ಲಿ ಎರಡು ಬೆಳ್ಳಿ ಪದಕ ಪಡೆದ ಕನ್ನಡದ ಕುವರಿ ಭವಾನಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಜಮ್ಮು-ಕಾಶ್ಮೀರದ ಗುಲ್ಮಾರ್ಗ್ನಲ್ಲಿ ನಡೆದ ರಾಷ್ಟ್ರೀಯ ವಿಂಟರ್ ಬಯಾಥ್ಲಾನ್ ಚಾಂಪಿಯನ್ಶಿಪ್-2022ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕೊಡಗಿನ ತೆಕ್ಕಡ ನಂಜುಂಡ ಅವರು 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ರೇಸ್ನಲ್ಲಿ ಎರಡು ಬೆಳ್ಳಿ ಪದಕ ಪಡೆದಿದ್ದಾರೆ.
ಭವಾನಿಯವರ ಪ್ರತಿಭೆಯನ್ನ ಗುರುತಿಸಿದ್ದ ರಾಜ್ಯ ಸರ್ಕಾರ, ಇವರಿಗೆ ಉತ್ತಮ ಸಾಧನೆ ಮಾಡಲು ಸಹಾಯವಾಗಲಿ ಎಂದು ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗಿತ್ತು.
ಭವಾನಿ ಅವರ ಸಾಧನೆ ಇಡೀ ದಕ್ಷಿಣ ಭಾರತಕ್ಕೆ ಹೆಮ್ಮೆ ತರುವಂತಹ ವಿಷಯ. ಮಂಜುಗಡ್ಡೆಯೇ ಇಲ್ಲದ ನಾಡಿನ ಯುವತಿ ಮಂಜುಗಡ್ಡೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದಿರುವುದು ಸಾಧನೆ. ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಸ್ಪರ್ಧಿಯೊಬ್ಬರು ವಿಂಟರ್ ಬಯಾಥ್ಲಾನ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪದಕ ಪಡೆದಿರುವುದು ಐತಿಹಾಸಿಕ ದಾಖಲೆಯಾಗಿದ್ದು, ಭವಾನಿಯವರು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆಲ್ಲಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.