ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಟಿಎಂಸಿ ಮುಖಂಡನ ಹತ್ಯೆಗೆ ಪ್ರತಿಕಾರವಾಗಿ 12 ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, 8 ಮಂದಿ ಸಜೀವ ದಹನವಾಗಿದ್ದಾರೆ. ಪಶ್ಚಿಮಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ರಾಜ್ಯಪಾಲ ಜಗದೀಪ್ ಧಂಖರ್ ಅವರು ಈ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದ್ದು, ರಾಜ್ಯದಲ್ಲಿ ಮಾನವ ಹಕ್ಕುಗಳನ್ನು ನಾಶಪಡಿಸಲಾಗಿದೆ ಮತ್ತು ಕಾನೂನು ಸುವ್ಯವಸ್ಥೆ ಹಳಿ ತಪ್ಪಿದೆ ಎಂದು ಕಿಡಿಕಾರಿದ್ದಾರೆ.
ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ರಾಜ್ಯಪಾಲರು, ರಾಜ್ಯವು ‘ಹಿಂಸಾಚಾರ ಸಂಸ್ಕೃತಿ ಮತ್ತು ಅಧರ್ಮದ ಹಿಡಿತದಲ್ಲಿದೆ ಎಂದು ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ನಾಯಕ ಬಹದ್ದೂರ್ ಶೇಖ್ ಅವರ ಹತ್ಯೆಯ ನಂತರ ದುಷ್ಕರ್ಮಿಗಳ ಗುಂಪು ಮನೆಗಳಿಗೆ ಬೆಂಕಿ ಹಚ್ಚಿದ್ದು, ಎಂಟು ಜನರನ್ನು ಸುಟ್ಟುಹಾಕಿದೆ. ಬಿರ್ಭೂಮ್ನ ರಾಮ್ಪುರಹತ್ನಲ್ಲಿ ನಡೆದ ಈ ಘಟನೆ ನನ್ನನ್ನು ವಿಚಲಿತಗೊಳಿಸಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ರಾತ್ರಿ ಸುಮಾರು 10-12 ಮನೆಗಳಿಗೆ ಜನಸಮೂಹ ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾದ ಶವಗಳನ್ನು ಇಂದು ಬೆಳಗ್ಗೆ ಪೊಲೀಸರು ಹೊರತೆಗೆದಿದ್ದಾರೆ.
ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ಎಂಬುದು ಸರ್ವೇ ಸಾಮಾನ್ಯವಾಗಿದ್ದು, ಹಿಂಸೆ ತಡೆಗಟ್ಟುವಲ್ಲಿ ಅಲ್ಲಿನ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
Horrifying violence and arson orgy #Rampurhat #Birbhum indicates state is in grip of violence culture and lawlessness. Already eight lives lost.
Have sought urgent update on the incident from Chief Secretary.
My thoughts are with the families of the bereaved. pic.twitter.com/vtI6tRJcBX
— Governor West Bengal Jagdeep Dhankhar (@jdhankhar1) March 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.