ನವದೆಹಲಿ: ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಡೆಹ್ರಾಡೂನ್ನ ಪರೇಡ್ ಗ್ರೌಂಡ್ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಸೇರಿದಂತೆ ಪಕ್ಷದ ಮುಖಂಡರು ಅದ್ಧೂರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
1990 ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಧಾಮಿ ಅವರಿಗೆ ಉತ್ತರಾಖಂಡದ ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಪ್ರಮಾಣ ವಚನ ಬೋಧಿಸಿದರು.
2012 ರ ವಿಧಾನಸಭಾ ಚುನಾವಣೆಯಿಂದ ಅವರು ಗೆಲ್ಲುತ್ತಿದ್ದ ಖತೀಮಾ ಕ್ಷೇತ್ರದಲ್ಲಿ ಈ ಬಾರಿ ಅವರು ಸ್ಥಾನ ಕಳೆದುಕೊಂಡಿದ್ದರೂ, ಒಟ್ಟು 70 ವಿಧಾನಸಭಾ ಸ್ಥಾನಗಳಲ್ಲಿ ಪಕ್ಷವು 47 ಸ್ಥಾನಗಳನ್ನುಗೆಲ್ಲುವಲ್ಲಿ ಧಾಮಿ ಪ್ರಮುಖ ಪಾತ್ರವಹಿಸಿದ್ದಾರೆ. ಉತ್ತರಾಖಂಡದ 21 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ.
LIVE : परेड ग्राउंड, देहरादून में नवनिर्वाचित सरकार का शपथ ग्रहण समारोह https://t.co/8yyHUK6Svs
— Pushkar Singh Dhami (@pushkardhami) March 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.