ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಮೂಲಕ ಅದನ್ನು ಅಂತಾರಾಷ್ಟ್ರೀಯಗೊಳಿಸಿದರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಆರೋಪಿಸಿದ್ದಾರೆ.
ಇದು ಭಾರತೀಯ ಸಮಸ್ಯೆಯಾಗಿರುವುದರಿಂದ ಈ ಸಮಸ್ಯೆ ಜಾಗತಿಕ ವೇದಿಕೆಗೆ ಹೋಗಬಾರದಿತ್ತು ಎಂದು ಅವರು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ಥಾನದ ನಡುವೆ ಮೊದಲ ಯುದ್ಧ ಪ್ರಾರಂಭವಾದ ನಂತರ 1948 ರ ಜನವರಿಯಲ್ಲಿ ಸಲ್ಲಿಸಿದ ಅರ್ಜಿಯ ಮೂಲಕ ಪ್ರಧಾನಿ ನೆಹರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮನವಿ ಮಾಡಿದ್ದರು. ಈ ಅರ್ಜಿಯ ಆಧಾರದ ಮೇಲೆ, ಭದ್ರತಾ ಮಂಡಳಿಯು ಉಭಯ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಭಾರತ ಮತ್ತು ಪಾಕಿಸ್ಥಾನಕ್ಕಾಗಿ ಯುಎನ್ ಆಯೋಗವನ್ನು ಸ್ಥಾಪಿಸಿತು.
ರಾಜ್ಯಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಕಾಶ್ಮೀರ ಸಮಸ್ಯೆ ಮೂಲಭೂತವಾಗಿ ಭಾರತಕ್ಕೆ ಸಂಬಂಧಿಸಿದ ವಿಷಯವಾಗಿದೆ. ಕಾಂಗ್ರೆಸ್ ಈ ವಿಷಯವನ್ನು ವಿಶ್ವಸಂಸ್ಥೆಗೆ ಕೊಂಡೊಯ್ದಿದೆ. ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರು ವಿಶ್ವಸಂಸ್ಥೆಗೆ ಈ ಸಮಸ್ಯೆಯನ್ನು ಕೊಂಡೊಯ್ದರು. ಈ ಸಮಸ್ಯೆ ಜಾಗತಿಕ ವೇದಿಕೆಗೆ ಹೋಗದೇ ಇದ್ದರೆ ಪರಿಹಾರ ಕಾಣುವುದಿಲ್ಲ ಎಂದು ಬ್ರಿಟಿಷರು ಅವರಿಗೆ ಸಲಹೆಗಳನ್ನು ನೀಡಿರಲೂಬಹುದು” ಎಂದಿದ್ದಾರೆ.
“ಇಂದಿನವರೆಗೂ ಪಾಕಿಸ್ಥಾನ ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಹೇಳಿದ್ದಾಋೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.