ನವದೆಹಲಿ: ಮಂಗಳವಾರ ಕನಿಷ್ಠ ಎಂಟು ಜನರು ಸುಟ್ಟು ಕರಕಲಾದ ಪಶ್ಚಿಮ ಬಂಗಾಳದ ಬಿರ್ಭುಮ್ ಹಿಂಸಾಚಾರವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಘಟನೆಯನ್ನು ಘೋರ ಅಪರಾಧ ಎಂದು ಬಣ್ಣಿಸಿದ ಮೋದಿ, ಇಂತಹ ಘಟನೆಗಳ ಅಪರಾಧಿಗಳನ್ನು ಮತ್ತು ಪ್ರೋತ್ಸಾಹಿಸುವವರನ್ನು ಎಂದಿಗೂ ಕ್ಷಮಿಸಬಾರದು ಎಂದು ಪಶ್ಚಿಮ ಬಂಗಾಳದ ಜನರನ್ನು ಒತ್ತಾಯಿಸಿದರು.
ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ಭರವಸೆ ವ್ಯಕ್ತಪಡಿಸಿದರು. ಕೇಂದ್ರದ ಪರವಾಗಿ, ಬಿರ್ಭೂಮ್ ಹಿಂಸಾಚಾರದ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷಿಸಲು ರಾಜ್ಯಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿಯವರು ನಿನ್ನೆ ಶಹೀದ್ ದಿವಸ್ ಸಂದರ್ಭದಲ್ಲಿ ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ನಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಪ್ರತಿ ಮಗುವೂ ಅಮರ್ ಶಹೀದ್ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗದ ಕಥೆಗಳಿಂದ ಸ್ಫೂರ್ತಿ ಪಡೆಯುತ್ತದೆ ಎಂದು ಮೋದಿ ಹೇಳಿದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.