ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಇಂದು ನವದೆಹಲಿಯಲ್ಲಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತುಕತೆ ನಡೆಸಿದರು. ಪೂರ್ವ ಲಡಾಖ್ನಲ್ಲಿನ ಕೆಲವು ಪ್ರದೇಶಗಳಲ್ಲಿ ಆರಂಭಿಕ ಮತ್ತು ಸಂಪೂರ್ಣ ಸೇನೆ ಹಿಂಪಡೆಯುವಿಕೆ ಅಗತ್ಯವನ್ನು ಎರಡೂ ಕಡೆಯವರು ಚರ್ಚಿಸಿದರು ಮತ್ತು ದ್ವಿಪಕ್ಷೀಯ ಸಂಬಂಧವು ಅದರ ಸ್ವಾಭಾವಿಕ ಹಾದಿಗೆ ಮರಳಲು ಅನುವು ಮಾಡಿಕೊಡುವ ಅಡೆತಡೆಗಳನ್ನು ನಿರ್ಮೂಲನೆ ಮಾಡುವ ಬಗ್ಗೆ ಚರ್ಚೆ ನಡೆಸಿದರು.
ಮೂಲಗಳ ಪ್ರಕಾರ, ನವದೆಹಲಿಯಲ್ಲಿ ನಡೆದ ಸಭೆಯಲ್ಲಿ, ಪ್ರಸ್ತುತ ಪರಿಸ್ಥಿತಿಯ ಮುಂದುವರಿಕೆ ಪರಸ್ಪರ ಹಿತಾಸಕ್ತಿಯಲ್ಲ ಮತ್ತು ಶಾಂತಿ ಮತ್ತು ನೆಮ್ಮದಿಯ ಮರುಸ್ಥಾಪನೆಯು ಪರಸ್ಪರ ನಂಬಿಕೆಯನ್ನು ನಿರ್ಮಿಸಲು ಮತ್ತು ಸಂಬಂಧಗಳಲ್ಲಿ ಪ್ರಗತಿಗೆ ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡರು.
ಶಾಂತಿಯ ಮರುಸ್ಥಾಪನೆಗಾಗಿ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದಲ್ಲಿ ಸಕಾರಾತ್ಮಕ ಸಂವಹನಗಳನ್ನು ಮುಂದುವರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಎರಡೂ ಕಡೆಯವರು ಬಾಕಿ ಉಳಿದಿರುವ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ಒಪ್ಪಿಕೊಂಡರು.
ಸಭೆಯಲ್ಲಿ, ಚೀನಾಗೆ ಭೇಟಿ ನೀಡುವಂತೆ ಚೀನಾದ ಕಡೆಯವರು ದೋವಲ್ ಅವರನ್ನು ಆಹ್ವಾನಿಸಿದರು. ದೋವಲ್ ಆಮಂತ್ರಣಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಮತ್ತು ತಕ್ಷಣದ ಸಮಸ್ಯೆಗಳನ್ನು ಯಶಸ್ವಿಯಾಗಿ ಪರಿಹರಿಸಿದ ನಂತರ ಅವರು ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ.
ಪ್ರವಾಸದಲ್ಲಿರುವ ಚೀನಾ ವಿದೇಶಾಂಗ ಸಚಿವರು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.