ಬೆಂಗಳೂರು: ಕರ್ನಾಟಕ ಸರ್ಕಾರವು 18 ನೇ ಶತಮಾನದಲ್ಲಿ ಮೈಸೂರನ್ನು ಆಳಿದ ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವ ಅಧ್ಯಾಯಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಕ್ರವಾರ ಮಾತನಾಡಿ, ಸಮಿತಿಯ ವರದಿಯು ರಾಜ್ಯದಲ್ಲಿನ ಪಠ್ಯಪುಸ್ತಕಗಳಲ್ಲಿ ವಿಶೇಷವಾಗಿ ಟಿಪ್ಪು ಸುಲ್ತಾನನ ಉಲ್ಲೇಖಗಳಿಗೆ ಸಂಬಂಧಿಸಿದಂತೆ ಬದಲಾವಣೆಗಳನ್ನು ಶಿಫಾರಸು ಮಾಡಿದೆ ಎಂದಿದ್ದಾರೆ.
“ಸಮಿತಿಯ ವರದಿಯನ್ನು ಸ್ವೀಕರಿಸಿದ್ದೇನೆ. ಚರ್ಚೆಯ ನಂತರ ಮುಂದಿನ ಶೈಕ್ಷಣಿಕ ವರ್ಷದಿಂದ ವರದಿ ಜಾರಿಗೆ ತರಲಾಗುವುದು” ಎಂದಿದ್ದಾರೆ. 18 ನೇ ಶತಮಾನದ ಆಡಳಿತಗಾರ ಟಿಪ್ಪು ಸುಲ್ತಾನನಿಗೆ ಸಂಬಂಧಿಸಿದಂತೆ ಇತಿಹಾಸದ ಪಾಠಗಳಲ್ಲಿ ಬದಲಾವಣೆಗಳನ್ನು ತರಲು ವರದಿಯು ಪ್ರಸ್ತಾಪಿಸಿದೆ ಎನ್ನಲಾಗಿದೆ.
ಹಿಜಾಬ್ ವಿವಾದ ಮತ್ತು ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲಿನ ನಿಷೇಧದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಹೀಗಾಗಿ ಸರ್ಕಾರ ಅತ್ಯಂತ ಸೂಕ್ಷ್ಮವಾಗಿ ವಿಷಯಗಳನ್ನು ನಿರ್ವಹಿಸುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಸಮಿತಿಯು ಟಿಪ್ಪು ಸುಲ್ತಾನನ ಅಧ್ಯಾಯವನ್ನು ಉಳಿಸಿಕೊಳ್ಳಬೇಕು ಆದರೆ ಆಡಳಿತಗಾರನನ್ನು ‘ವೈಭವೀಕರಿಸುವ’ ಕೆಲವು ಭಾಗಗಳನ್ನು ತೆಗೆದುಹಾಕಬೇಕು ಎಂದು ಉಲ್ಲೇಖಿಸಿದೆ ಎಂದು ತಿಳಿಸಿವೆ. ಯಾವ ಭಾಗಗಳನ್ನು ತೆಗೆದುಹಾಕಲಾಗುತ್ತದೆ ಎಂಬ ವಿವರಗಳು ಲಭ್ಯವಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.