ನವದೆಹಲಿ: ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಮರಳಿದ ಹದಿನೈದು ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು 50 ಕ್ರಿಮಿನಲ್ಗಳು ಶರಣಾಗಿದ್ದಾರೆ.
‘ನಾನು ಶರಣಾಗುತ್ತಿದ್ದೇನೆ, ದಯವಿಟ್ಟು ಗುಂಡು ಹಾರಿಸಬೇಡಿ’ ಎಂಬ ಫಲಕಗಳನ್ನು ಕೊರಳಿಗೆ ನೇತು ಹಾಕಿಕೊಂಡು ಆರೋಪಿಗಳು ಪೊಲೀಸ್ ಠಾಣೆಗೆ ಬಂದಿದ್ದಾರೆ ಎನ್ನಲಾಗಿದೆ.
50 ಕ್ರಿಮಿನಲ್ಗಳು ಶರಣಾಗಿರುವುದು ಮಾತ್ರವಲ್ಲದೆ ಅಪರಾಧವನ್ನು ತ್ಯಜಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಈ ನಡುವೆ, ಇಬ್ಬರು ಕ್ರಿಮಿನಲ್ಗಳನ್ನು ಹೊಡೆದುರುಳಿಸಲಾಗಿದ್ದು, ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದಾಗಿನಿಂದ 10 ಮಂದಿಯನ್ನು ಬಂಧಿಸಲಾಗಿದೆ.
“ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು, ರಾಜ್ಯದ ಮೂಲೆ ಮೂಲೆಯಲ್ಲಿರುವ ಅಪರಾಧಿಗಳಲ್ಲಿ ಭಯವನ್ನು ಹುಟ್ಟುಹಾಕಲು ಸೂಕ್ಷ್ಮ-ಯೋಜನೆಯ ಮೂಲಕ ತ್ವರಿತ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ADG, ಕಾನೂನು ಮತ್ತು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ.
“ಅಪರಾಧಕ್ಕೆ ಶೂನ್ಯ ಸಹಿಷ್ಣುತೆ ಕೇವಲ ಮಾಫಿಯಾ ವಿರುದ್ಧದ ಪರಿಣಾಮಕಾರಿ ಶಿಸ್ತುಕ್ರಮವಲ್ಲ, ನವೀಕೃತ ಜಾಗರೂಕತೆ ಮತ್ತು ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸುವುದು,” ಎಂದಿದ್ದಾರೆ.
ಮಾರ್ಚ್ 15 ರಂದು ಗೊಂಡಾ ಜಿಲ್ಲೆಯ ಛಾಪಿಯಾ ಪೊಲೀಸ್ ಠಾಣೆಯಲ್ಲಿ ಅಪಹರಣಕಾರ ಮತ್ತು ಸುಲಿಗೆಕೋರ ಗೌತಮ್ ಸಿಂಗ್ ಶರಣಾಗುವುದರೊಂದಿಗೆ ಈ ಟ್ರೆಂಡ್ ಪ್ರಾರಂಭವಾಯಿತು. ಅಂದಿನಿಂದ ರಾಜ್ಯದಾದ್ಯಂತ ವಿವಿಧ ಹಿನ್ನೆಲೆಯ ಹಲವಾರು ಅಪರಾಧಿಗಳು ಶರಣಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.