ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಬೆಳಗ್ಗೆ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಅವರನ್ನು ಭೇಟಿ ಮಾಡುವ ಮೂಲಕ ಶ್ರೀಲಂಕಾ ಪ್ರವಾಸವನ್ನು ಆರಂಭಿಸಿದರು.
ಡಾ. ಜೈಶಂಕರ್ ಅವರು ಆರ್ಥಿಕ ಪರಿಸ್ಥಿತಿ ಮತ್ತು ಭಾರತದ ಬೆಂಬಲದ ಬಗ್ಗೆ ಅವರೊಂದಿಗೆ ಚರ್ಚಿಸಿದ್ದಾರೆ. ನೆರೆಹೊರೆ ಮೊದಲು ನೀತಿಯಿಂದ ಭಾರತವು ಮಾರ್ಗದರ್ಶನ ಪಡೆಯುವುದನ್ನು ಮುಂದುವರಿಸುತ್ತದೆ ಎಂದು ಈ ಸಂದರ್ಭದಲ್ಲಿ ಪುನರುಚ್ಛರಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಲಂಕಾ ಸರ್ಕಾರದ ಅಸಮರ್ಥತೆಯ ಬಗ್ಗೆ ಸಾರ್ವಜನಿಕರ ಆಕ್ರೋಶ ಉಲ್ಬಣವಾಗುತ್ತಿರುವ ಸಮಯದಲ್ಲಿ ಜೈಶಂಕರ್ ಅವರು ಅಲ್ಲಿಗೆ ಭೇಟಿ ನೀಡಿರುವುದು ಎಲ್ಲರ ಕುತೂಹಲ ಕೆರಳಿಸಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾವನ್ನು ರಕ್ಷಿಸಲು ಭಾರತವು ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ವಿಸ್ತರಿಸಿದ ನಂತರ ಇದು ದ್ವೀಪ ರಾಷ್ಟ್ರಕ್ಕೆ ಅವರ ಮೊದಲ ಭೇಟಿಯಾಗಿದೆ.
ವಿದೇಶಾಂಗ ಸಚಿವರು ತಮ್ಮ ಮಾಲ್ಡೀವ್ಸ್ ಭೇಟಿಯ ನಂತರ ಶ್ರೀಲಂಕಾಕ್ಕೆ ಮೂರು ದಿನಗಳ ಭೇಟಿಗಾಗಿ ನಿನ್ನೆ ಕೊಲಂಬೊ ತಲುಪಿದರು. ಅವರು ಮುಂದಿನ ಎರಡು ದಿನಗಳಲ್ಲಿ ದ್ವಿಪಕ್ಷೀಯ ಮತ್ತು ಬಿಮ್ಸ್ಟಿಕ್ ಸಚಿವರ ಸಭೆಗಳನ್ನು ನಡೆಸಲಿದ್ದಾರೆ.
Began the visit by meeting Finance Minister @RealBRajapaksa.
Discussed the economic situation and India’s supportive response. We will continue to be guided by Neighbourhood First pic.twitter.com/D6K7Wq1JZd
— Dr. S. Jaishankar (@DrSJaishankar) March 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.