ನವದೆಹಲಿ: ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ 10 ಪಥದ ಎಕ್ಸ್ಪ್ರೆಸ್ ರಸ್ತೆಯು ಅಕ್ಟೋಬರ್ 2022 ರ ವೇಳೆಗೆ ಸಂಪೂರ್ಣಗೊಳ್ಳಲಿದೆ. ರೂ 8,172 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ.
ಈ ರಸ್ತೆಯು ಪ್ರಯಾಣದ ಸಮಯವನ್ನು 3 ಗಂಟೆಗಳಿಂದ 75 ನಿಮಿಷಕ್ಕೆ ಕಡಿತಗೊಳಿಸಲಿದೆ.
ಈ ಅತ್ಯಾಧುನಿಕ ಯೋಜನೆಯು 8 ಕಿ. ಮೀ. ಉದ್ದದ ಎಲಿವೇಟೆಡ್ ಕಾರಿಡಾರ್, 9 ಬೃಹತ್ ಸೇತುವೆ, 42 ಸಣ್ಣ ಸೇತುವೆ, 64 ಅಂಡರ್ಪಾಸ್, 11 ಮೇಲ್ಸೇತುವೆ, 4 ರೈಲು ಮೇಲ್ಸೇತುವೆ, 5 ಬೈಪಾಸ್ಗಳಂತಹ ಹಲವು ಆಯಾಮಗಳನ್ನು ಹೊಂದಿದೆ.
“ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಎರಡು ಪ್ರಮುಖ ನಗರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಪ್ರಚೋದನೆಯನ್ನು ನೀಡುತ್ತದೆ. ಇದರ ನಿರ್ಮಾಣ ಕಾರ್ಯವು ಮುಕ್ತಾಯದ ಹಂತದಲ್ಲಿದ್ದು, ಅಕ್ಟೋಬರ್ 2022 ರೊಳಗೆ ಪೂರ್ಣಗೊಳ್ಳಲಿದೆ” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎರಡು ನಗರಗಳ ನಡುವಿನ ಆರ್ಥಿಕ ಕಾರಿಡಾರ್ ಯೋಜನೆಯನ್ನು ಭಾರತಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಎಕ್ಸ್ಪ್ರೆಸ್ವೇ ಯೋಜನೆಯನ್ನು ಎರಡು ಪ್ಯಾಕೇಜ್ಗಳ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಮೊದಲನೆಯದು ಬೆಂಗಳೂರಿನಿಂದ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ಸಾಗುತ್ತದೆ ಮತ್ತು ಎರಡನೇ ಪ್ಯಾಕೇಜ್ ನಿಡಘಟ್ಟದಿಂದ ಮೈಸೂರಿಗೆ ಸಂಪರ್ಕಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.