ಜಮ್ಮು: ಭಯೋತ್ಪಾದಕರು ಮತ್ತು ಅವರ ಸಹಚರರನ್ನು ಹತ್ತಿಕ್ಕುವುದನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಭಯೋತ್ಪಾದಕರು ತಮ್ಮ ಕೃತ್ಯಗಳಿಗೆ ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡುವವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಮತ್ತು ಭಯೋತ್ಪಾದನೆಗೆ ಬಳಸಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
“ನನ್ನ ಸಂದೇಶವು ತುಂಬಾ ಸ್ಪಷ್ಟವಾಗಿದೆ. ಉಗ್ರರು ತಮ್ಮ ಕೃತ್ಯಗಳಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ನಾವು ನಮ್ಮ ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದೇವೆ ಮತ್ತು ಅವರು ಭಯೋತ್ಪಾದಕರು ಮತ್ತು ಅವರ ಸಹಚರರನ್ನು ಹತ್ತಿಕ್ಕುವ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ನಮಗೆ ಸಂಪೂರ್ಣ ನಂಬಿಕೆ ಇದೆ” ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾದಕ ವ್ಯಸನದ ಬಗ್ಗೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ನಾಗರಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲು ಮತ್ತು ಯುವ ಪೀಳಿಗೆಯನ್ನು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಲು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಮ್ಮು ಮತ್ತು ಕಾಶ್ಮೀರ ಪೊಲೀಸರ 150ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಿದ್ದ ‘ಏ ವತನ್ ತೇರೆ ಲಿಯೇ’ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಸಿನ್ಹಾ ಮಾತನಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.