ನವದೆಹಲಿ: ರತ್ನಗಳು ಮತ್ತು ಆಭರಣ ಉದ್ಯಮವು ತಮ್ಮ ರಫ್ತು ಗುರಿಯನ್ನು 35 ಶತಕೋಟಿ ಯುಎಸ್ ಡಾಲರ್ನಿಂದ 100 ಶತಕೋಟಿ ಯುಎಸ್ ಡಾಲರ್ಗೆ ಮೂರು ಪಟ್ಟು ಹೆಚ್ಚಿಸಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಕರೆ ನೀಡಿದ್ದಾರೆ.
ಮಂಗಳವಾರ ದುಬೈನಲ್ಲಿ ಭಾರತೀಯ ಆಭರಣ ಪ್ರದರ್ಶನ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗೋಯಲ್, ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ರತ್ನಗಳು ಮತ್ತು ಆಭರಣ ಕ್ಷೇತ್ರದ ಮೇಲೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಿದ್ದಾರೆ ಮತ್ತು ಈ ವಲಯದಲ್ಲಿ ಭಾರತವನ್ನು ಮೊದಲ ಸ್ಥಾನದಲ್ಲಿರಿಸುವ ಗುರಿ ಹೊಂದಿದ್ದಾರೆ. ಮೇಡ್ ಇನ್ ಇಂಡಿಯಾದ ಮೇಲೆ ಮಾತ್ರವಲ್ಲದೇ ಭಾರತದಲ್ಲಿ ವಿನ್ಯಾಸವಾಗುವ ಆಭರಣಗಳ ಮೇಲೂ ಗಮನಹರಿಸಬೇಕು ಎಂದು ಅವರು ಹೇಳಿದರು.
ಆಭರಣಗಳು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ ಮತ್ತು ಸಮಾಜದಲ್ಲಿ ಶೈಲಿ ಮತ್ತು ಸ್ಥಾನಮಾನದ ಸಂಕೇತವಾಗಿದೆ ಎಂದು ಅವರು ಹೇಳಿದರು.
ವಿಶ್ವಾದ್ಯಂತ ಆಭರಣ ಉದ್ಯಮದಲ್ಲಿ ಭಾರತವು 100 ಬಿಲಿಯನ್ ಡಾಲರ್ ರಫ್ತು ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಭಾರತ ಬ್ರ್ಯಾಂಡ್ ಅನ್ನು ಉತ್ತೇಜಿಸಲು ಕೇಂದ್ರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ವಿಶ್ವದ ವಿವಿಧ ದೇಶಗಳೊಂದಿಗೆ ವಿಸ್ತೃತ ಸಂಪರ್ಕವನ್ನು ಹೊಂದಿದೆ ಎಂದು ಅವರು ಹೇಳಿದರು.
“ನಾವು ಬ್ರ್ಯಾಂಡ್ ಇಂಡಿಯಾವನ್ನು ಉತ್ತೇಜಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಪ್ರಪಂಚದ ವಿವಿಧ ದೇಶಗಳೊಂದಿಗೆ ವಿಸ್ತೃತ ಸಂಪರ್ಕವನ್ನು ಹೊಂದಿದ್ದೇವೆ. ಇದು ಆಭರಣ ಉದ್ಯಮ ಸೇರಿದಂತೆ ಕಾರ್ಮಿಕ ಆಧಾರಿತ ಉದ್ಯೋಗ ಸೃಷ್ಟಿಸುವ ವಲಯಗಳಿಗೆ ಉತ್ತೇಜನ ನೀಡಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.