ನವದೆಹಲಿ: ಗೃಹ ವ್ಯವಹಾರಗಳ ಸಚಿವಾಲಯ ಅಧಿಸೂಚನೆ ಹೊರಡಿಸಿ, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ (ಐಆರ್ಎಫ್) ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ ಮತ್ತು ಮುಸ್ಲಿಂ ಯುವಕರನ್ನು ಮೂಲಭೂತವಾದಿಗಳನ್ನಾಗಿಸಿದ ಆರೋಪದ ಮೇಲೆ ಐದು ವರ್ಷಗಳ ಕಾಲ ನಿಷೇಧಿಸಿದೆ.
ಐಆರ್ಎಫ್ನ ಸಂಸ್ಥಾಪಕ ಜಾಕಿರ್ ನಾಯ್ಕ್ ಭಾಷಣಗಳು ಆಕ್ಷೇಪಾರ್ಹವಾಗಿವೆ, ಆತ ಭಯೋತ್ಪಾದಕರನ್ನು ಹೊಗಳುತ್ತಿದ್ದಾನೆ ಮತ್ತು ಪ್ರತಿಯೊಬ್ಬ ಮುಸ್ಲಿಮರೂ ಭಯೋತ್ಪಾದಕರಾಗಬೇಕು ಎಂದು ಘೋಷಿಸಿದ್ದಾನೆ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ಐಆರ್ಎಫ್ ಸಂಸ್ಥಾಪಕರು ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರಗೊಳಿಸುವುದನ್ನು ಉತ್ತೇಜಿಸುತ್ತಿದ್ದಾರೆ, ಆತ್ಮಹತ್ಯಾ ಬಾಂಬ್ ದಾಳಿಯನ್ನು ಸಮರ್ಥಿಸುತ್ತಾರೆ, ಹಿಂದೂಗಳು, ಹಿಂದೂ ದೇವರುಗಳು ಮತ್ತು ಇತರ ಧರ್ಮಗಳ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದಾರೆ, ಇದು ಇತರ ಧರ್ಮಗಳಿಗೆ ಅವಹೇಳನಕಾರಿಯಾಗಿದೆ ಎಂದಿದೆ.
“ನಾಯ್ಕ್ ಭಾರತ ಮತ್ತು ವಿದೇಶಗಳಲ್ಲಿನ ಮುಸ್ಲಿಂ ಯುವಕರು ಮತ್ತು ಭಯೋತ್ಪಾದಕರನ್ನು ಭಯೋತ್ಪಾದಕ ಕೃತ್ಯಗಳನ್ನು ಮಾಡಲು ಮತ್ತಷ್ಟು ಪ್ರೇರೇಪಿಸುತ್ತಿದ್ದಾನೆ” ಎಂದು ಅಧಿಸೂಚನೆ ಹೇಳಿದೆ.
ಗುಜರಾತ್, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಐಆರ್ಎಫ್, ಅದರ ಸದಸ್ಯರು ಮತ್ತು ಸಹಾನುಭೂತಿ ಹೊಂದಿರುವವರ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.