ನವದೆಹಲಿ: ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (ಎಎಫ್ಎಸ್ಪಿಎ) ಅಡಿಯಲ್ಲಿ ತೊಂದರೆಗೊಳಗಾದ ಪ್ರದೇಶಗಳ ವ್ಯಾಪ್ತಿಯನ್ನು ಕಡಿತ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಘೋಷಿಸಿದ್ದಾರೆ.
ನಿರ್ಧಾರವನ್ನುಸರಣಿ ಟ್ವೀಟ್ಗಳ ಮೂಲಕ ಪ್ರಕಟಿಸಿದ ಶಾ, ಈ ಘೋಷಣೆಯನ್ನು ಪ್ರಮುಖ ಸಂದರ್ಭ ಎಂದು ಕರೆದರು, ಇದು ಈಶಾನ್ಯದಲ್ಲಿ ಸುಧಾರಿತ ಭದ್ರತಾ ಪರಿಸ್ಥಿತಿ ಮತ್ತು ವೇಗದ ಬೆಳವಣಿಗೆಯ ಕಾರಣದಿಂದ ಸಾಧ್ಯವಾಗಿದೆ ಎಂದಿದ್ದಾರೆ.
“ಮಹತ್ವದ ಹಂತದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಯರ ನಿರ್ಣಾಯಕ ನಾಯಕತ್ವದಲ್ಲಿ ಭಾರತ ಸರ್ಕಾರ ದಶಕಗಳ ನಂತರ ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರ ರಾಜ್ಯಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ (AFSPA) ಅಡಿಯಲ್ಲಿ ತೊಂದರೆಗೊಳಗಾದ ಪ್ರದೇಶಗಳನ್ನು ಕಡಿತ ಮಾಡಲು ನಿರ್ಧರಿಸಿದೆ” ಎಂದಿದ್ದಾರೆ.
“ಎಎಫ್ಎಸ್ಪಿಎ ಅಡಿಯಲ್ಲಿ ಪ್ರದೇಶಗಳಲ್ಲಿನ ಕಡಿತವು ಸುಧಾರಿತ ಭದ್ರತಾ ಪರಿಸ್ಥಿತಿ ಮತ್ತು ದಂಗೆಯನ್ನು ಕೊನೆಗೊಳಿಸಲು ಮತ್ತು ಈಶಾನ್ಯದಲ್ಲಿ ಶಾಶ್ವತ ಶಾಂತಿಯನ್ನು ತರಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ನಿರಂತರ ಪ್ರಯತ್ನಗಳು ಮತ್ತು ಹಲವಾರು ಒಪ್ಪಂದಗಳ ಕಾರಣದಿಂದಾಗಿ ತ್ವರಿತ ಅಭಿವೃದ್ಧಿಯ ಫಲಿತಾಂಶವಾಗಿದೆ” ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಚಲ ಬದ್ಧತೆಗೆ ಧನ್ಯವಾದ ಅರ್ಪಿಸಿದ ಶಾ, “ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದ್ದ ಈಶಾನ್ಯ ಪ್ರದೇಶವು ಈಗ ಶಾಂತಿ, ಸಮೃದ್ಧಿ ಮತ್ತು ಅಭೂತಪೂರ್ವ ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.
Government of India decides to reduce disturbed areas under Armed Forces Special Powers Act (AFSPA) in the states of Nagaland, Assam and Manipur after decades: Union Home Minister Amit Shah pic.twitter.com/2WDCJmp9gI
— ANI (@ANI) March 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.