ನವದೆಹಲಿ: ಪಾಶ್ಚಿಮಾತ್ಯ ನಿರ್ಬಂಧಗಳ ಅಡೆತಡೆಗಳನ್ನು ತೊಡೆದು ಹಾಕಲು ರಷ್ಯಾವು ಭಾರತ ಮತ್ತು ಇತರ ಸ್ನೇಹಪರ ರಾಷ್ಟ್ರಗಳೊಂದಿಗೆ ರಾಷ್ಟ್ರೀಯ ಕರೆನ್ಸಿಗಳಲ್ಲಿ ವ್ಯಾಪಾರವನ್ನು ನಡೆಸಲು ಮುಂದಾಗಿದೆ ಮತ್ತು ತೈಲ, ಮಿಲಿಟರಿ ಉಪಕರಣಗಳು ಮತ್ತು ಇತರ ಸರಕುಗಳ ಭಾರತದ ಅಗತ್ಯವನ್ನು ಪರಿಹರಿಸಲು ನಿರ್ಧರಿಸಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಶುಕ್ರವಾರ ಹೇಳಿದ್ದಾರೆ.
ಭಾರತ-ರಷ್ಯಾ ಸಂಬಂಧಗಳ ಮೇಲೆ ಉಕ್ರೇನ್ನಲ್ಲಿನ ಬಿಕ್ಕಟ್ಟಿನ ಪರಿಣಾಮಗಳು ಮತ್ತು ವ್ಯಾಪಾರ, ಹೂಡಿಕೆ ಮತ್ತು ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಮುಂದುವರಿಸುವ ಮಾರ್ಗಗಳನ್ನು ಒಳಗೊಂಡತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ ನಂತರ ಅವರು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಭಾರತಕ್ಕೆ ಕಡಿಮೆ ಬೆಲೆಯಲ್ಲಿ ಕಚ್ಚಾತೈಲವನ್ನು ಪೂರೈಕೆ ಮಾಡು ಪ್ರಸ್ತಾಪವನ್ನು ಈ ವೇಳೆ ರಷ್ಯಾ ಮತ್ತೊಮ್ಮೆ ಭಾರತದ ಮುಂದಿಟ್ಟಿದೆ. ಭಾರತ ಏನು ಬಯಸುತ್ತದೆಯೋ ಅದನ್ನೇ ನಾವು ಪೂರೈಸುತ್ತೇವೆ ಎಂದು ರಷ್ಯಾ ವಿದೇಶಾಂಗ ಸಚಿವ ಹೇಳಿದ್ದಾರೆ.
ರಷ್ಯಾದ ಜೊತೆಗೆ ವ್ಯಾಪಾರ ಸಂಬಂಧ ವೃದ್ಧಿಸಿದರೆ ನಿರ್ಬಂಧ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಮತ್ತು ಬ್ರಿಟನ್ ನೀಡಿರುವ ಎಚ್ಚರಿಕೆಯ ನಡುವೆಯೂ ಭಾರತ-ರಷ್ಯಾ ವಿದೇಶಾಂಗ ಸಚಿವರನ್ನು ಭಾರತಕ್ಕೆ ಬರಮಾಡಿಕೊಂಡಿದೆ. ಗುರುವಾರ ರಾತ್ರಿ ಭಾರತಕ್ಕೆ ಆಗಮಿಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ ಅಲ್ಲದೆ ವಿದೇಶಾಂಗ ಸಚಿವರು ಜೊತೆಯು ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತದ ರೂಪಾಯಿ ಮತ್ತು ರಷ್ಯಾದ ರೂಬಲ್ ಮೂಲಕ ವಹಿವಾಟು ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.