ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ದೇವಾಲಯಗಳು ಮತ್ತು ಇತರ ಧಾರ್ಮಿಕ ಕೇಂದ್ರಗಳ ಮೇಲೆ ವಾಣಿಜ್ಯ ತೆರಿಗೆಯನ್ನು ವಿಧಿಸದಂತೆ ನಗರದ ಮುನ್ಸಿಪಲ್ ಕಾರ್ಪೊರೇಷನ್ಗೆ ಸೂಚನೆ ನೀಡಿದ್ದಾರೆ.
ಎರಡನೇ ಅವಧಿಗೆ ರಾಜ್ಯದ ಉಸ್ತುವಾರಿ ವಹಿಸಿಕೊಂಡ ನಂತರ ಅಯೋಧ್ಯೆಗೆ ಮೊದಲ ಭೇಟಿ ನೀಡಿದ ಆದಿತ್ಯನಾಥ್ ಅವರು, ದೇವಾಲಯ ನಗರಿಯಲ್ಲಿ ಮುಂಬರುವ ರಾಮ ನವಮಿ ಮೇಳದ ಸಿದ್ಧತೆಯನ್ನು ಪರಿಶೀಲಿಸಿದರು.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ನಂತರ ನಡೆಯುವ ಮೇಳದಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಅಯೋಧ್ಯೆಯಲ್ಲಿ, ಆದಿತ್ಯನಾಥ್ ಅವರು ಹನುಮಾನ್ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಭಗವಾನ್ ರಾಮ ಮಂದಿರದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು.
ನಂತರ ಅವರು ಬಲರಾಂಪುರ ಜಿಲ್ಲೆಗೆ ಭೇಟಿ ನೀಡಿದರು ಮತ್ತು ಅಲ್ಲಿ ಮೂರು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿನ ದೇವಿ ಪಟಾಣ ದೇವಸ್ಥಾನದಲ್ಲಿ ರಾತ್ರಿ ತಂಗಿದ್ದು, ಇಂದು ಸಿದ್ಧಾರ್ಥನಗರಕ್ಕೆ ತೆರಳಲಿದ್ದಾರೆ.
ಈ ನಡುವೆ, ಸಿಎಂ ಆದಿತ್ಯನಾಥ್ ಅವರು ಇಂದಿನಿಂದ ಪ್ರಾರಂಭವಾಗುವ “ಚೈತ್ರ ನವರಾತ್ರಿ” ಸಮಯದಲ್ಲಿ ಒಂಬತ್ತು ದಿನಗಳ ಉಪವಾಸವನ್ನು ಆಚರಿಸುತ್ತಾರೆ ಮತ್ತು ರಾಜ್ಯ ಮತ್ತು ರಾಷ್ಟ್ರದಲ್ಲಿ ಶಾಂತಿ, ಸಮೃದ್ಧಿ, ಆರೋಗ್ಯ ಮತ್ತು ಸಂತೋಷಕ್ಕಾಗಿ ವಿಶೇಷ ಪೂಜೆ ಮಾಡುತ್ತಾರೆ.
ಆದಿತ್ಯನಾಥ್ ಅವರು ದೇವಾಲಯಗಳು ಮತ್ತು ಇತರ ಧಾರ್ಮಿಕ ದೇವಾಲಯಗಳಿಂದ ವಾಣಿಜ್ಯ ತೆರಿಗೆಯನ್ನು ತೆಗೆದುಕೊಳ್ಳದಂತೆ ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಶನ್ಗೆ ಸೂಚಿಸಿದ್ದಾಅರೆ. ಮಹಾನಗರ ಪಾಲಿಕೆಯು ಮಠ, ಮಂದಿರ, ಧರ್ಮಶಾಲೆ ಮತ್ತು ದತ್ತಿ ಸಂಸ್ಥೆಗಳಿಂದ ಮನೆ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ತೆರಿಗೆಯನ್ನು ವಾಣಿಜ್ಯ ದರದಲ್ಲಿ ವಿಧಿಸಬಾರದು, ಏಕೆಂದರೆ ಈ ಎಲ್ಲಾ ಸಂಸ್ಥೆಗಳು ದಾನ ಮತ್ತು ಸಾರ್ವಜನಿಕ ಸೇವೆಯನ್ನು ಮಾಡುತ್ತವೆ ಎಂದು ಸಿಎಂ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.