ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಉಭಯ ದೇಶಗಳ ನಡುವಿನ ನಿಕಟ ನೆರೆಹೊರೆಯ ಬಾಂಧವ್ಯದ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.
ದೇವುಬಾ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ಮೂರು ದಿನಗಳ ಭೇಟಿಗಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದ್ದಾರೆ.
“ನಮ್ಮ ಎರಡು ದೇಶಗಳ ನಡುವಿನ ಸ್ನೇಹ ಮತ್ತು ಸಹಕಾರದ ವಿಶೇಷ ಸಂಬಂಧಗಳನ್ನು ಗಾಢವಾಗಿಸಲು ಹೊಸ ಅವಕಾಶ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವಿಟರ್ನಲ್ಲಿ ಮೋದಿ, ದೇವುಬಾ ಮಾತುಕತೆಗೂ ಮೊದಲು ಹೇಳಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಶುಕ್ರವಾರ ಸಂಜೆ ದೇವುಬಾ ಅವರನ್ನು ಭೇಟಿ ಮಾಡಿದರು.
ಕಠ್ಮಂಡುವಿನಲ್ಲಿ ರಾಜಕೀಯ ಪ್ರಕ್ಷುಬ್ಧತೆಯ ನಂತರ ಐದನೇ ಬಾರಿಗೆ ಕಳೆದ ವರ್ಷ ಜುಲೈನಲ್ಲಿ ಪ್ರಧಾನ ಮಂತ್ರಿಯಾದ ದೇವುಬಾ ಅವರ ಮೊದಲ ದ್ವಿಪಕ್ಷೀಯ ವಿದೇಶ ಭೇಟಿ ಇದಾಗಿದೆ. ದೇವುಬಾ ಅವರು ನೇಪಾಳದ ಪ್ರಧಾನ ಮಂತ್ರಿಯಾಗಿ ನಾಲ್ಕು ಹಿಂದಿನ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. 2017 ರಲ್ಲಿ ಪ್ರಧಾನ ಮಂತ್ರಿಯಾಗಿ ಅವರ ಕೊನೆಯ ಭಾರತ ಭೇಟಿಯಾಗಿತ್ತು.
ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಐದು ಭಾರತೀಯ ರಾಜ್ಯಗಳೊಂದಿಗೆ ದೇಶವು 1,850 ಕಿಮೀ ಗಡಿಯನ್ನು ಹಂಚಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.