ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ನಿನ್ನೆ ನವದೆಹಲಿಯಲ್ಲಿ ನಿಯೋಗ ಮಟ್ಟದ ಮಾತುಕತೆ ನಡೆಸಿದರು.
ಮಾತುಕತೆಯ ಸಂದರ್ಭದಲ್ಲಿ, ಉಭಯ ನಾಯಕರು ಭಾರತ-ನೇಪಾಳ ಪಾಲುದಾರಿಕೆಯಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ಸಹಕಾರ ಕಾರ್ಯಸೂಚಿಯನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ದೇವುಬಾ ಜಂಟಿಯಾಗಿ ಹಲವು ಯೋಜನೆಗಳಿಗೆ ಚಾಲನೆ ನೀಡಿದರು. ಅವರು ಭಾರತದ ಬಿಹಾರದ ಜಯನಗರ ಮತ್ತು ನೇಪಾಳದ ಕುರ್ತಾ ನಡುವಿನ 35 ಕಿಲೋಮೀಟರ್ ಉದ್ದದ ಗಡಿಯಾಚೆಗಿನ ಪ್ರಯಾಣಿಕ ರೈಲು ಸೇವೆಗಳನ್ನು ಆರಂಭಿಸಿದರು. ಇಬ್ಬರೂ ನಾಯಕರು ಜಂಟಿಯಾಗಿ ಸೋಲ್ ಕಾರಿಡಾರ್ 132 ಕೆವಿ ಪವರ್ ಟ್ರಾನ್ಸ್ಮಿಷನ್ ಲೈನ್ ಮತ್ತು ನೇಪಾಳದಲ್ಲಿ ಭಾರತ ಸರ್ಕಾರದ ಲೈನ್ ಆಫ್ ಕ್ರೆಡಿಟ್ ಅಡಿಯಲ್ಲಿ ನಿರ್ಮಿಸಲಾದ ಸಬ್ಸ್ಟೇಷನ್ ಅನ್ನು ಉದ್ಘಾಟಿಸಿದರು.
ಇಬ್ಬರು ಪ್ರಧಾನಮಂತ್ರಿಗಳು ನೇಪಾಳದಲ್ಲಿ ರುಪೇ ಕಾರ್ಡ್ ಅನ್ನು ಬಿಡುಗಡೆ ಮಾಡಿದರು. ಮಾತುಕತೆಯ ನಂತರ ಉಭಯ ಪ್ರಧಾನಿಗಳ ಸಮ್ಮುಖದಲ್ಲಿ ನಾಲ್ಕು ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು, ಪ್ರಧಾನಿ ಮೋದಿ ಮತ್ತು ಅವರ ನೇಪಾಳದ ಪಿಎಂ ನಡುವಿನ ಮಾತುಕತೆಗಳು ಸಕಾರಾತ್ಮಕ, ಮುಂದಕ್ಕೆ ನೋಡುವ ಮತ್ತು ಭದ್ರತೆ, ಅಭಿವೃದ್ಧಿ ಮತ್ತು ವ್ಯಾಪಾರದಂತಹ ಕ್ಷೇತ್ರಗಳನ್ನು ಒಳಗೊಂಡಿವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.