ನವದೆಹಲಿ: ಭೂ ಲೋಕದ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರ ಕಣಿವೆಯು ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಅತಿ ಹೆಚ್ಚು ಆಗಮನಕ್ಕೆ ಸಾಕ್ಷಿಯಾಗುತ್ತಿದೆ. ಶ್ರೀನಗರ ವಿಮಾನ ನಿಲ್ದಾಣವು ಪ್ರಯಾಣಿಕರನ್ನು ನಿಭಾಯಿಸುವಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯುತ್ತಿದೆ.
ವಿಮಾನ ನಿಲ್ದಾಣವು ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ನಿಭಾಯಿಸುತ್ತಿದೆ. 9823 ಪ್ರಯಾಣಿಕರನ್ನು ಹೊತ್ತ 58 ವಿಮಾನಗಳು ನಿನ್ನೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಿದವು, ದಿನಕ್ಕೆ 7000 ಕ್ಕಿಂತ ಕಡಿಮೆ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಮೀರಿ ಅದು ಕಾರ್ಯನಿರ್ವಹಿಸಿದೆ.
ಕಳೆದ ಕೆಲವು ದಿನಗಳಿಂದ ಶ್ರೀನಗರಕ್ಕೆ ವಿಮಾನ ಮತ್ತು ರಸ್ತೆಯ ಮೂಲಕ ದಾಖಲೆ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಶ್ರೀನಗರ, ಗುಲ್ಮಾರ್ಗ್, ಪಹಲ್ಗಾಮ್ ಮತ್ತು ಇತರ ಪ್ರವಾಸಿ ತಾಣಗಳಲ್ಲಿನ ಹೋಟೆಲ್ಗಳು, ಅತಿಥಿ ಗೃಹಗಳು ಮತ್ತು ಹೌಸ್ಬೋಟ್ಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ.
ಮಾರ್ಚ್ ತಿಂಗಳಲ್ಲಿ 1.50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಕಾಶ್ಮೀರವನ್ನು ತಲುಪಿದ್ದಾರೆ. ಜಮ್ಮುವಿಗೆ ತಲುಪುವ ರೈಲುಗಳು ದೇಶಾದ್ಯಂತ ಸಂಪೂರ್ಣ ತುಂಬಿ ಹೋಗಿವೆ. ಜಮ್ಮುವಿನ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಚೈತ್ರ ನವರಾತ್ರಿಯ ಸಮಯದಲ್ಲಿ ಯಾತ್ರಾರ್ಥಿಗಳು ದಾಖಲೆಯ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮೆಹ್ತಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಉತ್ತುಂಗ ತಲುಪುತ್ತಿದೆ ಮತ್ತು ಮುಂಬರುವ ತಿಂಗಳುಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವನ್ನು ಸರ್ಕಾರ ನಿರೀಕ್ಷಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.