ನವದೆಹಲಿ: ಆಹಾರ ಭದ್ರತಾ ಯೋಜನೆಯಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ಭಾರತವು ತೀವ್ರ ಬಡತನದ ಹೆಚ್ಚಳವನ್ನು ತಪ್ಪಿಸಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF)ಯ ವರದಿ ಹೇಳಿದೆ.
2019 ರಲ್ಲಿ ಭಾರತದಲ್ಲಿ ತೀವ್ರ ಬಡತನ 1 ಪ್ರತಿಶತಕ್ಕಿಂತ ಕಡಿಮೆ ಇತ್ತು ಮತ್ತು 2020 ರ ಸಾಂಕ್ರಾಮಿಕ ವರ್ಷದಲ್ಲಿಯೂ ಅದು ಆ ಮಟ್ಟದಲ್ಲಿದೆಯೇ ಉಳಿದಿದೆ ಎಂದು ಐಎಂಎಫ್ ಹೇಳಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹಾರ ಭದ್ರತಾ ಯೋಜನೆಯಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ ತೀವ್ರ ಬಡತನದ ಮಟ್ಟದಲ್ಲಿ ಹೆಚ್ಚಳ ಆಗುವುದನ್ನು ತಡೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ವರದಿ ಹೇಳಿದೆ.
ಬಡತನ ಮತ್ತು ಅಸಮಾನತೆಯ ಮೇಲೆ ಆಹಾರ ಸಬ್ಸಿಡಿಯು ಪರಿಣಾಮವನ್ನು ಬೀರಿದೆ. 2019 ರ ಸಾಂಕ್ರಾಮಿಕ ಪೂರ್ವ ವರ್ಷದಲ್ಲಿ ತೀವ್ರ ಬಡತನವು 0.8 ಪ್ರತಿಶತದಷ್ಟು ಕಡಿಮೆಯಾಗಿದೆ ಮತ್ತು 2020 ರ ಸಾಂಕ್ರಾಮಿಕ ವರ್ಷದಲ್ಲಿ ಅದು ಅದೆ ಮಟ್ಟದಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಆಹಾರ ಸಬ್ಸಿಡಿ ಪ್ರಮುಖವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.