ನವದೆಹಲಿ: ಲೋಕಸಭೆಯಲ್ಲಿ ಇಂದು ಉಕ್ರೇನ್ ಬಿಕ್ಕಟ್ಟಿನ ಕುರಿತ ಚರ್ಚೆಯ ಸಂದರ್ಭ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಉಕ್ರೇನ್ನ ಬುಚಾ ನಗರದಲ್ಲಿ ನಡೆದ ಹತ್ಯೆಗಳನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
“ಬುಚಾದಲ್ಲಿ ನಡೆದ ಹತ್ಯೆಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಸ್ವತಂತ್ರ ತನಿಖೆಯ ಕರೆಯನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಭಾರತವು ಉಕ್ರೇನ್ ಮತ್ತು ರಷ್ಯಾ ನಡುವಿನ ಮಾತುಕತೆಗೆ ಉತ್ತೇಜನ ನೀಡುತ್ತಿದೆ ಎಂದ ಅವರು, ತಕ್ಷಣವೇ ಯುದ್ಧವನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.
ಸಾಮಾನ್ಯ ನಾಗರಿಕರು ಅನಿವಾರ್ಯ ಸಮಸ್ಯೆಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದು ಭಾರತದ ಹಿತಾಸಕ್ತಿಯಾಗಿದೆ ಎಂದು ಅವರು ಹೇಳಿದ್ದಾರೆ.
“ನಮ್ಮ ಹಿತಾಸಕ್ತಿಯಲ್ಲಿ ಏನಿದೆ ಎಂಬುದನ್ನು ನಾವು ನಿರ್ಧರಿಸುತ್ತಿದ್ದೇವೆ. ಸಂಕೀರ್ಣ ಪರಿಸ್ಥಿತಿಯಲ್ಲಿ, ಪ್ರತಿ ರಾಷ್ಟ್ರವು ತನ್ನ ಜನಸಂಖ್ಯೆಯ ಯೋಗಕ್ಷೇಮವನ್ನು ಕಾಪಾಡುವ ನೀತಿಗಳನ್ನು ಅಳವಡಿಸಿಕೊಳ್ಳುತ್ತದೆ. ಭಾರತದಲ್ಲಿ ಸಾಮಾನ್ಯ ಜನರು ಅನಿವಾರ್ಯ ಸಮಸ್ಯೆಗಳಿಗೆ ಒಳಗಾಗದಂತೆ ನಾವು ಖಚಿತಪಡಿಸಿಕೊಳ್ಳಬೇಕು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.