ಮಂಗಳೂರು : ಕ್ರೀಡೆಯಿಂದ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯಾವುದೇ ಕ್ರೀಡೆಯಲ್ಲಿ ಯಶಸ್ಸನ್ನು ಪಡೆಯ ಬೇಕಿದ್ದರೆ, ಆ ಕ್ರೀಡೆಯ ಕುರಿತು ಶ್ರದ್ಧೆ ಮತ್ತು ಆಸಕ್ತಿ ಮುಖ್ಯ. ವಾಲಿಬಾಲ್ ಆಟದಿಂದ ಮನುಷ್ಯನ ದೇಹದ ಎಲ್ಲಾ ಅಂಗಗಳಿಗೂ ವ್ಯಾಯಾಮ ದೊರೆಯುತ್ತದೆ. ಉಳಿದ ಕ್ರೀಡೆಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳು ವಾಲಿಬಾಲ್ ಆಟದ ಬಗೆಗೂ ಗಮನ ಹರಿಸಬೇಕು ಎಂದು ಅಂತರಾಷ್ಟ್ರೀಯ ಖ್ಯಾತಿಯ ಕಬಡ್ಡಿ ಕ್ರೀಡಾಪಟು ಶ್ರೀ ಉದಯ ಚೌಟ ಅವರು ಅಭಿಪ್ರಾಯಪಟ್ಟರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶಾರದಾ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರು ನಗರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರಾದ ನ್ಯಾಯವಾದಿ ಶ್ರೀ ಕೆ. ಎಸ್. ಕಲ್ಲೂರಾಯರು ವಹಿಸಿದ್ದರು. ವೇದಿಕೆಯಲ್ಲಿ ತುಳುನಾಡು ಎಜ್ಯುಕೇಶನಲ್ ಟ್ರಸ್ಟಿನ ಟ್ರಸ್ಟಿಯಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರರು, ಶಾರದಾ ಸಮೂಹ ಸಂಸ್ಥೆಗಳ ಸಲಹೆಗಾರರಾದ ಡಾ. ಲೀಲಾ ಉಪಾಧ್ಯಾಯ, ಶಾರದಾ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್, ದ.ಕ. ಜಿಲ್ಲೆಯ ಕ್ರೀಡಾ ಸಂಯೋಜಕರಾದ ಶ್ರೀ ಶಶಿಧರ ಮಾಣಿ, ಶಾರದಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಮಹಾಬಲೇಶ್ವರ ಭಟ್ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಂದಕಿಶೋರ್, ಶ್ರೇಯಸ್, ಪ್ರತೀಕ್ ಶಂಕರ್, ಕೌಶಿಕ್ ಭಟ್ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಮೊದಲಿಗೆ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಡಿ. ಶ್ರೀಪತಿ ರಾವ್ ಸ್ವಾಗತಿಸಿ, ಕೊನೆಯಲ್ಲಿ ಉಪನ್ಯಾಸಕಿ ಶ್ರೀಮತಿ ಅನುಪಮ ಜಿ. ಕೆ. ವಂದನಾರ್ಪಣೆ ಮಾಡಿದರು. ಶ್ರೀಮತಿ ಯಶೋದಾ ಕಾರ್ಯಕ್ರಮ ನಿರ್ವಹಿಸಿ, ಶ್ರೀ ರಮೇಶ್ ಆಚಾರ್ಯರು ಅತಿಥಿಗಳ ಪರಿಚಯ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.