ನವದೆಹಲಿ: ಇಂದು ವಿಶ್ವ ಆರೋಗ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯುಷ್ ಸಚಿವಾಲಯವು ಯೋಗ ಉತ್ಸವ- ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಕೆಂಪು ಕೋಟೆಯಲ್ಲಿ ಆಯೋಜಿಸಿದೆ.
ಕೇಂದ್ರ ಸರ್ಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಉಪಕ್ರಮದ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಕ್ಕೂ ಮೊದಲು ಯೋಗ ಉತ್ಸವವನ್ನು ಆಯೋಜಿಸಲಾಗಿದೆ.
“ಯೋಗವು ನಮ್ಮ ಪೂರ್ವಜರ ಜೀವನ ವಿಧಾನವಾಗಿದೆ. ‘ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಾವು ಇಂದು ಅಂತರಾಷ್ಟ್ರೀಯ ಯೋಗ ದಿನದ ಮೊದಲು ಈ ಯೋಗ ವ್ಯಾಯಾಮವನ್ನು ಆಯೋಜಿಸಿದ್ದೇವೆ” ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದರು.
“ಯೋಗವು ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣದಲ್ಲಿ ಮಾತ್ರವಲ್ಲದೆ ರೋಗಗಳ ಚಿಕಿತ್ಸೆಯಲ್ಲಿಯೂ ಪರಿಣಾಮಕಾರಿಯಾಗಿದೆ. ಇಡೀ ಜಗತ್ತು ಇಂದು ಆರೋಗ್ಯಕರ ಜೀವನಶೈಲಿಗಾಗಿ ಯೋಗವನ್ನು ಅಳವಡಿಸಿಕೊಳ್ಳುತ್ತಿದೆ ”ಎಂದು ಓಂ ಬಿರ್ಲಾ ಹೇಳಿದ್ದಾರೆ
ಆರೋಗ್ಯವಂತ ರಾಷ್ಟ್ರ ನಿರ್ಮಾಣದ ಗುರಿಯನ್ನು ತಲುಪಲು ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ಆಜಾದಿ ಕಾ ಅಮೃತ್ ಮಹೋತ್ಸವದ ದೃಷ್ಟಿಯಿಂದ, ಆರೋಗ್ಯಕರ ಜೀವನಶೈಲಿಯನ್ನು ಆರಿಸಿಕೊಳ್ಳಲು ಪ್ರತಿಯೊಬ್ಬರನ್ನು ಪ್ರೋತ್ಸಾಹಿಸಲು ಅಂತರರಾಷ್ಟ್ರೀಯ ಯೋಗ ದಿನಕ್ಕೆ 75 ದಿನಗಳ ಮೊದಲು ಯೋಗ ಉತ್ಸವವನ್ನು ಆಯೋಜಿಸಲಾಗಿದೆ” ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.