ಮಂಗಳೂರು: ಮಂಗಳೂರು ಲಿಟ್ ಫೆಸ್ಟ್ನ 4 ನೇ ಆವೃತ್ತಿ ಇಂದು ನಗರದ ಓಶಿಯನ್ ಪರ್ಲ್ ನಲ್ಲಿ ಶತಾವಧಾನಿ ಡಾ.ಆರ್.ಗಣೇಶ್ ಅವರಿಂದ ಉದ್ಘಾಟನೆಗೊಂಡಿತು.
ಬಳಿಕ ಡಾ.ಅಜೆಕಲಾ ಗಿರೀಶ್ ಭಟ್ ಅವರೊಂದಿಗೆ ಶತಾವಧಾನಿ ಆರ್ ಗಣೇಶ್ ಅವರು ಸಂವಾದ ನಡೆಸಿದರು.
ಉಡುಪಿ, ದಕ್ಷಿಣ -ಕನ್ನಡ ಜಿಲ್ಲೆ ನನಗೆ ಸಾಕಷ್ಟು ಪ್ರೇರಣೆ ನೀಡಿದೆ. ಇಲ್ಲಿನ ಕವಿಗಳಿಂದ ಸದಾ ಸ್ಪೂರ್ತಿ ಪಡೆದಿದ್ದೇನೆ. ಇಂತಹ ಸಾಹಿತ್ಯ ಹಬ್ಬ ಆಯೋಜನೆ ಇಂದು ಬಹುಮುಖ್ಯವಾಗಿದೆ. ಇಂಟರ್ನೆಟ್ ಯುಗದಲ್ಲಿ ವೈಯಕ್ತಿಕ ಬಾಂಧವ್ಯ ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ಇಂತಹ ಸಾಹಿತ್ಯ ಹಬ್ಬ ಆಯೋಜನೆ ಮಹತ್ವದ್ದಾಗಿದೆ. ಕಲೆ, ಸಾಹಿತ್ಯ ಹೀಗೆ ಬೇರೆ ಬೇರೆ ಕ್ಷೇತ್ರದ ಜನ ಒಂದೆಡೆ ಸೇರುವುದರಿಂದ ಸನಾತನತೆಯ ಸಬಲೀಕರಣವಾಗುತ್ತದೆ.
ಸಂಸ್ಕೃತ ಆಡುಭಾಷೆಯಾದಾಗ ಸ್ವಾರಸ್ಯ ಇರುತ್ತದೆ. ಭಾಷೆ ಕಲಿಯದೆ ಮೂಲಗ್ರಂಥಗಳ ಕಲಿಕೆ ಸಾಧ್ಯವಿಲ್ಲ. ವಿಜ್ಞಾನ ಅಂದರೆ ಶಾಸ್ತ್ರ. ತರ್ಕ ಶುದ್ಧ ಚಿಂತನೆ ಅತ್ಯಗತ್ಯ. ಸಂಸ್ಕೃತ ಆಡುಭಾಷೆಯಾದಾಗ ಸ್ವಾರಸ್ಯ ಇರುತ್ತದೆ. ಭಾಷೆ ಕಲಿಯದೆ ಮೂಲಗ್ರಂಥಗಳ ಕಲಿಕೆ ಸಾಧ್ಯವಿಲ್ಲ. ವಿಜ್ಞಾನ ಅಂದರೆ ಶಾಸ್ತ್ರ. ತರ್ಕ ಶುದ್ಧ ಚಿಂತನೆ ಅತ್ಯಗತ್ಯ ಎಂದರು.
ಸಾಹಿತ್ಯ, ದೃಶ್ಯ, ಶ್ರಾವ್ಯ, ಶಿಲ್ಪ, ಪ್ರತಿಯೊಂದು ಕಲೆ ಎಲ್ಲದರಲ್ಲೂ ಸಾರ್ವಭೌಮವಾಗಿ ರಸ ಇರಬೇಕು. ಕಲೆಯ ಪರಮೋದ್ದೇಶ ರಸ. ರಸ ಅಂದರೆ ಹೆಚ್ಚಿನ ಅರಿವು. ಅರಿವೇ ಆನಂದ. ಅರಿವು ಆನಂದಗಳಿಗೆ ವ್ಯತ್ಯಾಸವಿಲ್ಲ. ರಸವನ್ನು ನಿರಾಕರಿಸಲು ಮುಖ್ಯ ಕಾರಣ ಭಾವಸಮೃದ್ಧಿ ಇಲ್ಲದೇ ಇರುವುದು. ನವೋದಯದವರಿಗೆ ಬಹುಪಾಂಡಿತ್ಯ ಇತ್ತು. ಆದರೆ ನಂತರದವರಿಗೆ ಅದು ಇಲ್ಲ. ಧ್ವನಿ ಇಲ್ಲದೆ ರಸ ಇಲ್ಲ. ಧ್ವನಿಪೂರ್ಣವಾಗಿ ಶೃಂಗಾರವನ್ನು ಅಭಿವ್ಯಕ್ತ ಮಾಡಬಹುದು.ರಸವೊಂದೇ ಕವಿ ನೀತಿ ಎಂದು ಕುವೆಂಪು ಹೇಳಿದ್ದರು. ಇಂದು ಕುವೆಂಪು ಅವರನ್ನು ಬೇರೆ ಬೇರೆ ಉದ್ದೇಶಕ್ಕೆ ಬಳಸಲಾಗುತ್ತದೆ. ಶುದ್ಧ ಸಾಹಿತ್ಯವನ್ನು ಎಲ್ಲರಿಗೂ ತಿಳಿಯುವಂತೆ ಮಾಡುವುದು ಇಂದಿನ ಅಗತ್ಯ ಎಂದರು.
ಅಭಿಜಾತ ಸಾಹಿತ್ಯ ಪುನರ್ ರಚನೆ ಮಾಡುವಾಗ ಅನೇಕರು ಮೂಲ ಕವಿಗೆ ಅನ್ಯಾಯ ಮಾಡುತ್ತಾರೆ. ರಾಮಾಯಣ ಬರೆಯುವವರು ರಾಮನನ್ನೇ ಕೆಟ್ಟದಾಗಿ ಚಿತ್ರಿಸಿ ಮೂಲ ರಾಮಾಯಣಕ್ಕೆ ಧಕ್ಕೆ ತರುತ್ತಾರೆ. ಪ್ರಸಿದ್ಧ ವಿದ್ವಾಂಸನ ಬರವಣಿಗೆಯನ್ನು ತಿರುಚುವುದು ಅಪರಾಧ ಎಂದರು.
ಭಾರತೀಯ ಕಲೆ, ಸಂಸ್ಕೃತಿಯನ್ನು ನಾವು ಇಂದು ಅಖಂಡವಾಗಿ ನೋಡುತ್ತಿಲ್ಲ. ದೇಶಿಯತೆಯನ್ನು ಹೊಗಳುವುದು ಇಂದು ಫ್ಯಾಷನ್ ಆಗಿದೆ. ಆದರೆ ದೇಶೀಯತೆ ಅರ್ಥ ಮಾಡಲು ನಿಜವಾದ ಮಾರ್ಗ ಆರಿಸಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.