ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಪ್ರಧಾನಮಂತ್ರಿಗಳ ಮ್ಯೂಸಿಯಂನ್ನು ನವದೆಹಲಿಯಲ್ಲಿ ಲೋಕಾರ್ಪಣೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಹೇಳಿದರು ಮತ್ತು ಭಾರತದ ಪ್ರಜಾಪ್ರಭುತ್ವದ ದೊಡ್ಡ ವೈಶಿಷ್ಟ್ಯವೆಂದರೆ ಅದು ಕಾಲಾನಂತರದಲ್ಲಿ ನಿರಂತರವಾಗಿ ಬದಲಾಗುತ್ತಿದೆ ಎಂದಿದ್ದಾರೆ.
ಭಾರತದ ಪ್ರಜಾಪ್ರಭುತ್ವವು ದೇಶವನ್ನು ನಾವೀನ್ಯತೆ ಮತ್ತು ಹೊಸ ಆಲೋಚನೆಗಳನ್ನು ಸ್ವೀಕರಿಸಲು ಪ್ರೇರೇಪಿಸುತ್ತದೆ. ಪ್ರಜಾಪ್ರಭುತ್ವವನ್ನು ಬಲಪಡಿಸುವ ಹೆಮ್ಮೆಯ ಸಂಪ್ರದಾಯವನ್ನು ನಾವು ಹೊಂದಿದ್ದೇವೆ ಎಂದು ಅವರು ಹೇಳಿದರು.
ಬಹುಪಾಲು ಪ್ರಧಾನಿಗಳು ತೀರಾ ಸಾಮಾನ್ಯ ಕುಟುಂಬದಿಂದ ಬಂದವರು ಎಂಬುದು ಜನತೆಗೆ ಹೆಮ್ಮೆಯ ಸಂಗತಿ ಎಂದು ಬಣ್ಣಿಸಿದರು.
ಕುಗ್ರಾಮದಿಂದ ಬಂದವರಾಗಿದ್ದರೂ, ಅತ್ಯಂತ ಬಡವರು ಮತ್ತು ರೈತ ಕುಟುಂಬದಿಂದ ಬಂದವರು ದೇಶದ ಪ್ರಧಾನಿಯಾಗಲು ಸಾಧ್ಯವಾದರೆ, ಇದು ಭಾರತೀಯ ಪ್ರಜಾಪ್ರಭುತ್ವದ ಶ್ರೇಷ್ಠ ಸಂಪ್ರದಾಯಗಳ ಮೇಲಿನ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಮೋದಿ ಹೇಳಿದರು.
ಸ್ವಾತಂತ್ರ್ಯಾ ನಂತರದ ಪ್ರತಿಯೊಂದು ಸರ್ಕಾರಗಳು ಭಾರತವನ್ನು ಇಂದಿನ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಕೊಡುಗೆ ನೀಡಿವೆ ಎಂದರು.
ಈ ವಸ್ತುಸಂಗ್ರಹಾಲಯವು ಪ್ರತಿ ಸರ್ಕಾರದ ಹಂಚಿಕೆಯ ಪರಂಪರೆಯ ಜೀವಂತ ಪ್ರತಿಬಿಂಬವಾಗಿದೆ ಎಂದು ಹೇಳಿದರು. ದೇಶವು ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುತ್ತಿರುವ ಈ ಸಮಯದಲ್ಲಿ ವಸ್ತುಸಂಗ್ರಹಾಲಯವು ಸ್ಫೂರ್ತಿಯಾಗಿದೆ ಎಂದು ಹೇಳಿದ ಪ್ರಧಾನಿ, ಸಂಗ್ರಹಾಲಯವು ಅವರಿಗೆ ಜ್ಞಾನ, ಕಲ್ಪನೆಗಳು, ಅನುಭವಗಳ ಹೆಬ್ಬಾಗಿಲು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.