ಬೆಂಗಳೂರು : ಮೆಟ್ರೋ , ಸಬ್ ಅರ್ಬನ್ ರೈಲು, ರಸ್ತೆ, ಹೊಸ ಬಡಾವಣೆಗಳ ನಿರ್ಮಾಣ, ಸ್ಯಾಟಿಲೈಟ್ ಟೌನ್ಗಳ ನಿರ್ಮಾಣಗಳ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಾಸ್ತಿ ಭವನ’ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ 'ಮಾಸ್ತಿ ಭವನ' ನಿರ್ಮಾಣಕ್ಕೆ ಮುಖ್ಯಮಂತ್ರಿ @BSBommai ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ @karkalasunil, ಸಹಕಾರ ಸಚಿವ @STSomashekarMLA,
1/2 pic.twitter.com/i6xrkQhpXd— CM of Karnataka (@CMofKarnataka) April 18, 2022
ಬೆಂಗಳೂರನ್ನು ಅಂತರರಾಷ್ಟ್ರೀಯ ಬ್ರ್ಯಾಂಡ್ ಮಾಡುವ ಮೂಲಕ ಆರ್ಥಿಕತೆಗೆ ಇಂಬು ನೀಡಲಾಗುತ್ತದೆ. ಬೆಂಗಳೂರು ಭಾರತ, ಕರ್ನಾಟಕ ಹೆಮ್ಮೆ ಪಡುವ ನಗರವಾಗಲಿದೆ. ಬೆಂಗಳೂರು ಕೇವಲ ಕಟ್ಟಡಗಳಿಂದಾಗುವುದಿಲ್ಲ. ಉತ್ತಮ ಸಾಹಿತ್ಯ, ಗ್ರಂಥಾಲಯ, ಕ್ರೀಡೆ ಹೀಗೆ ಎಲ್ಲ ರಂಗಗಳಲ್ಲಿಯೂ ಬೆಂಗಳೂರು ಅಭಿವೃದ್ಧಿಯಾಗಬೇಕು. ಬೆಂಗಳೂರಿನ ಸಮಗ್ರ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನ ಅಭಿವೃಧ್ದಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವ ಮೂಲಕ ಬೆಂಗಳೂರಿನ ಸಂಪೂರ್ಣ ಚಿತ್ರಣ ಬದಲಾಗಲಿದೆ ಎಂದರು.
ಸಹಕಾರ ಕ್ಷೇತ್ರದಲ್ಲಿ ಕ್ರಾಂತಿ:
ಸಚಿವ ಸೋಮಶೇಖರ್ ಅವರ ಕಾರ್ಯಕ್ಷಮತೆಯಿಂದ ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಈ ಬಾರಿ 33 ಲಕ್ಷ ರೈತರಿಗೆ ಶೂನ್ಯಬಡ್ಡಿ ಸಾಲ ಸೌಲಭ್ಯ, ರೈತರಿಗೆ ಯಶಸ್ವಿನಿ ಯೋಜನೆ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ ಎಂದರು.
ಮಾಸ್ತಿ ಸಾಹಿತ್ಯ ಲೋಕದ ಆಸ್ತಿ:
ಮಾಸ್ತಿಯವರ ಸಾಹಿತ್ಯದ ಎಲ್ಲ ಚಟುವಟಿಕೆಗಳು ಭವನದಲ್ಲಿ ಆಗಲಿದೆ. ಮಾಸ್ತಿ ಅವರು ಸಾಹಿತ್ಯ ಲೋಕಕ್ಕೆ ನೀಡಿರುವ ಆಸ್ತಿ ಈ ಭವನದ ಮೂಲಕ ಮುಂದಿನ ಜನಾಂಗಕ್ಕೂ ಮುಂದುವರೆಯಲಿದೆ ಎಂಬ ವಿಶ್ವಾಸವಿದೆ. ಮಾಸ್ತಿಯವರು ಕೇವಲ ಕರ್ನಾಟಕದ ಅಸ್ತಿಯಲ್ಲ, ಭಾರತ ದೇಶದ ಆಸ್ತಿಯನ್ನಾಗಿ ಮಾಡುವ ಆಶಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.
ಕನ್ನಡದ ಅಸಮಾನ್ಯ ಸಾಹಿತಿಗಳು :
ಕನ್ನಡ ಸಾಹಿತ್ಯಕ್ಕೆ ಅತ್ಯಂತ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗಳು ಸಂದಿವೆ. ಕನ್ನಡ ಸಾಹಿತ್ಯ ಮನುಕುಲಕ್ಕೆ ಕೊಟ್ಟಿರುವ ಕೊಡುಗೆ ಅಪಾರ. ನಮ್ಮ ದೇಶದಲ್ಲಿ ಚರಿತ್ರೆ ಇದೆ. ಒಳ್ಳೆಯ ಚಾರಿತ್ರ್ಯ ಬೇಕಿದೆ. ಒಳ್ಳೆಯ ಚಾರಿತ್ರ್ಯ ಒಳ್ಳೆಯ ಚಿಂತನೆ ಹಾಗೂ ಅದರ ಅಭಿವ್ಯಕ್ತಿ ಸಾಹಿತ್ಯದಿಂದ ಮಾತ್ರ ಸಾಧ್ಯ. ಸಾಹಿತ್ಯದಲ್ಲಿ ಉತ್ಕøಷ್ಟತೆಯ ಪ್ರತಿಪಾದನೆ ದೊಡ್ಡ ತಪಸ್ಸು. ಅಂತಹ ತಪ್ಪಸ್ಸಿನ ಮೂಲಕ ಸಾಹಿತ್ಯ ದಿಗ್ಗಜರು ಜ್ಞಾನಪೀಠ ಪುರಸ್ಕøತರು. ಸಾಮಾನ್ಯ ಜನರ ನಡುವೆ ಅಸಮಾನ್ಯ ಸಾಹಿತಿಗಳು ಕನ್ನಡದಲ್ಲಿದ್ದಾರೆ ಎಂದರು.
ಮಾಸ್ತಿ ಭವನದಲ್ಲಿ ಸಾಹಿತ್ಯಾತ್ಮಕ ಸಂಶೋಧನೆ :
ವಿಭಿನ್ನ ದೃಷ್ಟಿಕೋನ, ವಾಸ್ತವಾಂಶದ ನೆಲೆಗಟ್ಟಿನ ವಿಶ್ಲೇಷಣೆ, ವೈಚಾರಿಕತೆಯನ್ನು ಮಾಸ್ತಿಯರ ಕೃತಿಗಳಲ್ಲಿ ಕಾಣಬಹುದು. ಮಾಸ್ತಿಯವರ ವಿಚಾರ ಬಂಢಾರ ಇವತ್ತಿನ ಕಾಲಕ್ಕೆ ಯಾವ ರೀತಿ ಸಾಮ್ಯತೆ, ಭಿನ್ನತೆಗಳಿವೆ ಎನ್ನುವ ಬಗ್ಗೆ ಚಿಂತನೆ,ಸಾಹಿತ್ಯಾತ್ಮಕ ಸಂಶೋಧನಾ ಕಾರ್ಯಗಳು ಮಾಸ್ತಿ ಭವನದಲ್ಲಿ ಆಗಬೇಕು. ಮಾಸ್ತಿ ಭವನದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದರು.
ಚಂದ್ರಶೇಖರ ಕಂಬಾರ ಅವರ ಚಿಂತನೆ, ಜಾನಪದ ಸೊಗಡು ಮನಸ್ಸಿಗೆ ಹತ್ತಿರವಾಗುವಂಥದ್ದು. ಅವರ ಒತ್ತಾಸೆಯಿಂದ ಹಾವೇರಿಯಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ವೈಚಾರಿಕ ಚಿಂತನೆಗೆ, ಸಮಾಜದ ಅಂಕುಡೊಂಕುಗಳನ್ನು ಅವರ ಕೃತಿಗಳು ಬಿಂಬಿಸುತ್ತವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.